LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್‌ನನ್ನು ಗುಂಡಿಕ್ಕಿ ಹತ್ಯೆ ಕೇಸ್‌ - ಇಬ್ಬರ ಬಂಧನ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಶನಿವಾರ ಮುಂಬೈನಲ್ಲಿ ಗುಂಡಿಕ್ಕಿ ಕೊಲೆಗೈದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಘಟನೆ ಬಾಂದ್ರಾದಲ್ಲಿರುವ ಬಾಬಾ ಸಿದ್ದಿಕ್​ ಅವರ ಪುತ್ರ ಹಾಗೂ ಮಹಾರಾಷ್ಟ್ರ ಶಾಸಕ ಜೀಶನ್​ ಸಿದ್ದಿಕ್ ಅವರ ಕಚೇರಿಯ ಹೊರಗಡೆ ಶನಿವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ. ದಸರಾ ಹಿನ್ನೆಲೆಯಲ್ಲಿ ಸಿದ್ದಿಕ್ ಅವರು ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ವಾಹನದಲ್ಲಿ ಬಂದ ಮೂವರು ಮುಸುಕುಧಾರಿಗಳು 9.9 ಎಂಎಂ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ. ಮೂರು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಒಂದು ಗುಂಡು ಸಿದ್ದಿಕಿಯ ಎದೆಗೆ ಬಡಿದು ಸ್ಥಳದಲ್ಲೇ ಕುಸಿದು ಬಿದ್ದರು. ಒಂದು ಗುಂಡು ಬಾಬಾ ಸಿದ್ದಿಕ್ ಅವರ ವಾಹನದ ವಿಂಡ್ ಶೀಲ್ಡ್ ಅನ್ನು ಸೀಳಿದೆ. ಬಾಬಾ ಸಿದ್ದಿಕ್​ ಅವರ ಹೊಟ್ಟೆ ಮತ್ತು ಎದೆಗೆ ಗುಂಡು ಹಾರಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಬಾ ಸಿದ್ದಿಕ್​ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆರೋಪಿಗಳು ನಟೋರಿಯಸ್​ ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನ ಸದಸ್ಯರು ಎಂದು ವಿಚಾರಣೆ ವೇಳೆ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೇ. 100ರಷ್ಟು ಸುಂಕ ಕಡಿತಕ್ಕೆ ಭಾರತ ಸರ್ಕಾರ ಒಪ್ಪಿಗೆ: ಶೀಘ್ರದಲ್ಲೇ ವ್ಯಾಪಾರ ಒಪ್ಪಂದ- ಟ್ರಂಪ್'ಪಾಕಿಸ್ತಾನದ ಏಜೆಂಟ್ ರೀತಿ ಕಾಂಗ್ರೆಸ್ ನಾಯಕರು ವರ್ತಿಸುತ್ತಿದ್ದಾರೆ'- ರವಿಕುಮಾರ್ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟ‌ರ್ ಪತನ: ತಪ್ಪಿದ ಅನಾಹುತ'ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ'- ಶೋಭಾರಾವಣ-ಮಂಡೋದರಿ ಪಾತ್ರದಲ್ಲಿ ಯಶ್‌-ಕಾಜಲ್‌ ಜೋಡಿಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್​ಗೆ ಮಹತ್ವದ ಜವಾಬ್ದಾರಿGold Price ಈ ತಿಂಗಳ ಅಂತ್ಯದೊಳಗೆ ಇನ್ನಷ್ಟು ಕುಸಿಯಲಿದೆ ಚಿನ್ನದ ಬೆಲೆ?'ಆಪರೇಷನ್ ಸಿಂಧೂರ' ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್ಆಪರೇಷನ್ ಸಿಂಧೂರ್’ಗೆ ಕರ್ನಾಟಕದ ಡ್ರೋನ್ ಬಳಕೆ! ಸ್ಕೈ ಸ್ಟ್ರೈಕರ್ ಹೆಸರಿನ ಸೂಸೈಡ್ ಡ್ರೋನ್’ಗಳು!ಕೂಲಿ ಕಾರ್ಮಿಕೆಯಾಗಿದ್ದ ಮಹಿಳೆ ಬೀದಿ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರು ಮಕ್ಕಳ ತಾಯಿ v/s ಮೂರು ಯುವಕರು… ಅಷ್ಟಕ್ಕೂ ಅಲ್ಲಿ ಆಗಿದ್ದೇನು?