LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಕೇಸ್‌ ತನಿಖೆಗೆ ಹೈಕೋರ್ಟ್ ಅಸ್ತು - ಸುರ್ಜೇವಾಲ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ಹೈಕಮಾಂಡ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಕೋರ್ಟ್ ತೀರ್ಪಿನ ಬಗ್ಗೆ ವಿವರಣೆ ನೀಡಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹೈಕೋರ್ಟ್ ಮೊರೆ ಹೋದ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಗಮನಕ್ಕೆ ತಂದು ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ಆಗ ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ನಾವು ಇರುತ್ತೇವೆ ಎಂದು ಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿತ್ತು. ಆದ್ರೆ ಈಗ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿ ತನಿಖೆಗೆ ಆದೇಶಿಸಿರೋದ್ರಿಂದ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ. ಸಿಎಂ ಸ್ಥಾನದಲ್ಲಿದ್ದುಕೊಂಡೇ ಮುಂದಿನ ಕಾನೂನು ಹೋರಾಟ ಮಾಡಿ ಅಂತಾರೋ ಅಥಾವ ಸಿಎಂ ಸ್ಥಾನದಿಂದ ಕೆಳಗಿಳಿದು ಕಾನೂನು ಹೋರಾಟ ಮಾಡಿ ಅನ್ನುತ್ತಾ ಹೈಕಮಾಂಡ್ ಅನ್ನೋದು ಪ್ರಶ್ನೆಯಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!