LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ ಒಪ್ಪಿಕೊಂಡ ಸರಕಾರ - ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ

ಬೆಂಗಳೂರು/ಮೈಸೂರು: ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಹಗರಣವನ್ನು ಬಯಲಿಗೆ ತಂದಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಎದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಗಂಗರಾಜು ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ . ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ.

ಈ ಮಧ್ಯೆ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರವೇ ಹೊರಡಿಸಿರುವ ಆದೇಶ ಈಗ ಸಿಎಂಗೆ ತಲೆನೋವಾಗುವ ಸಾಧ್ಯತೆಗಳಿವೆ. ಆರಂಭದಿಂದಲೂ 50:50 ರ ಅನುಪಾತದಲ್ಲಿ ಸೈಟ್ ಹಂಚಿಕೆ ಆಗಿದೆ ಎಂಬ ಆರೋಪವನ್ನು ವಿಪಕ್ಷ ಬಿಜೆಪಿ ಮಾಡುತ್ತಲೇ ಬಂದಿತ್ತು. ಆದರೆ ನಿನ್ನೆ(ಸೆ.02) ಹೊರಡಿಸಲ್ಪಟ್ಟಿರುವ ಅಮಾನತು ಆದೇಶದಲ್ಲಿ 50:50 ಅನುಪಾತದಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಿರುವ ಕಾರಣವನ್ನು ಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ದೂರುದಾರರ ಆರೋಪವನ್ನು ರಾಜ್ಯ ಸರ್ಕಾರವೇ ಒಪ್ಪಿಕೊಂಡಂತಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST