LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಗ್ರೇನ್ ಸಮಸ್ಯೆಗೆ ನಾವು ಹೇಳೋ ಈ ಟಿಪ್ಸ್ ಫಾಲೋ ಮಾಡಿ

ತಲೆನೋವು ಪ್ರತಿಯೊಬ್ಬ ಮನುಷ್ಯನಿಗೂ ಬರುವ ಸಾಮಾನ್ಯ ಆರೋಗ್ಯ ಸಮಸ್ಯೆ. ಆದರೆ ಕೆಲವರಿಗೆ ಮಾತ್ರ ತಲೆನೋವು ಮೈಗ್ರೇನ್‌ ಆಗಿ ಕಾಡುವುದರ ಜೊತೆಗೆ ಜೀವನವನ್ನು ತುಂಬಾ ನೀರಸವನ್ನಾಗಿಸುತ್ತದೆ. ಎಷ್ಟೇ ಚಿಕಿತ್ಸೆ ತೆಗೆದುಕೊಂಡರೂ ಈ ಮೈಗ್ರೇನ್  ಸಂಪೂರ್ಣವಾಗಿ ಮಾಯವಾಗುವುದಿಲ್ಲ. ಆದರೆ ನಾವು ಕೊಡುವ ಈ  ಕೆಲವು ಸಿಂಪಲ್ ಸಲಹೆಗಳೊಂದಿಗೆ ನೀವು ತಲೆ ನೋವಿನಿಂದ ಮುಕ್ತಿ ಪಡೆಯಬಹುದು.

ನೀರು:


ನಿರ್ಜಲೀಕರಣವು ಕೆಲವು ಜನರಲ್ಲಿ ಮೈಗ್ರೇನ್ ಅನ್ನು ಪ್ರಚೋದಿಸಬಹುದು. ಹೀಗಾಗಿ ಮೈಗ್ರೇನ್ ಸಮಸ್ಯೆ ಇರುವವರು ಸಾಕಷ್ಟ ನೀರು ಕುಡಿಯಬೇಕು.

ಮಸಾಜ್


ಒತ್ತಡ ಮತ್ತು ಮೈಗ್ರೇನ್ ನೋವನ್ನು ನಿವಾರಿಸಲು ಕುತ್ತಿಗೆ ಮತ್ತು ಭುಜದ ಸ್ನಾಯುಗಳನ್ನು ಮಸಾಜ್ ಮಾಡಬಹುದು. ಇದು ನಿಮಗೆ ಒತ್ತಡವನ್ನು ನಿವಾರಿಸಿ ವಿಶ್ರಾಂತಿಯನ್ನು ನೀಡುತ್ತದೆ. ಮಸಾಜ್‌ ಪೂರ್ಣಪ್ರಮಾಣದಲ್ಲಿ ಅಲ್ಲವಾದರೂ ಮೈಗ್ರೇನ್‌ನಿಂದ ಕೆಲ ಕಾಲ ರಿಲೀಫ್‌ ನೀಡುತ್ತೆ.

ಆಹಾರ


ತಲೆನೋವು ಸುಲಭವಾಗಿ ನಿಯಂತ್ರಣಕ್ಕೆ ಬರುವುದಿಲ್ಲ. ಆ ಸಮಯದಲ್ಲಿ ಸಂಸ್ಕರಿಸಿದ ಆಹಾರ ಮತ್ತು ಕ್ಯಾನ್ಡ್‌ ಫೂಡ್‌, ಉಪ್ಪಿನಕಾಯಿ ಆಹಾರವನ್ನು ಸೇವಿಸಬಾರದು. ವೇಗವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ ಮೈಗ್ರೇನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಲ್ಯಾವೆಂಡರ್ ಎಣ್ಣೆ:


ಲ್ಯಾವೆಂಡರ್ ಸಾರಭೂತ ತೈಲವನ್ನು ಉಸಿರಾಡುವುದರಿಂದ ಮೈಗ್ರೇನ್‌ನಿಂದ ಉಂಟಾಗುವ ಅಸ್ವಸ್ಥತೆಯನ್ನು ಕಡಿಮೆ ಮಾಡಬಹುದು. ಮೈಗ್ರೇನ್ ಬಂದಾಗ ತಕ್ಷಣ ಲ್ಯಾವೆಂಡರ್ ಎಣ್ಣೆಯ ವಾಸನೆಯನ್ನು ಅನುಭವಿಸಬಹುದು ಅಥವಾ ಲ್ಯಾವೆಂಡರ್ ಫ್ಲೇವರ್ ಇರುವ ರೂಮ್ ಫ್ರೆಶ್ನರ್ ಬಳಸಬಹುದು.

ಯೋಗ


ಯೋಗ ಭಂಗಿಗಳು, ಉಸಿರಾಟದ ವ್ಯಾಯಾಮಗಳು ಮತ್ತು ಧ್ಯಾನವು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ಮೈಗ್ರೇನ್ ನೋವಿಗೆ ಯೋಗವು ಪ್ರಯೋಜನಕಾರಿ ಎಂದು ಕೆಲವೊಂದು ಸಂಶೋಧನೆ ತೋರಿಸಿವೆ. ಈ ಸಣ್ಣ ಪರಿಹಾರಗಳು ತಲೆನೋವಿನ ತೀವ್ರತೆಯನ್ನು ಕಡಿಮೆ ಮಾಡಬಹುದು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರಕ್ಕೊಮ್ಮೆ ಸಿಇಒ ತಾಲ್ಲೂಕು-ಗ್ರಾಪಂ ಕಚೇರಿಗೆ ಕಡ್ಡಾಯ ಭೇಟಿ.!ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರು