ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
https://bcsuddi.com/%e0%b2%b5%e0%b2%b0%e0%b3%8d%e0%b2%97%e0%b2%be%e0%b2%b5%e0%b2%a3%e0%b3%86%e0%b2%af-%e0%b2%a8%e0%b2%bf%e0%b2%b0%e0%b3%80%e0%b2%95%e0%b3%8d%e0%b2%b7%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf/
ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.