LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲು ರಾಹುಲ್ ಗಾಂಧಿ ವಿರುದ್ಧ ದೂರು ಕೊಟ್ರು: ಕೊನೆಗೆ ನಾವು ‘ಫ್ಲೈಯಿಂಗ್‌ ಕಿಸ್‌’ ಕೊಟ್ಟದ್ದನ್ನು ನೋಡಿಯೇ ಇಲ್ಲ ಎಂದ ಬಿಜೆಪಿ ಸಂಸದೆ

ಸಂಸದ ರಾಹುಲ್‌ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಂಸತ್ತಿನಲ್ಲಿ ಫ್ಲೈಯಿಂಗ್‌ ಕಿಸ್‌ ನೀಡಿ ಅನುಚಿತವಾಗಿ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದೆಯರು ಸ್ಪೀಕರ್‌ಗೆ ಮನವಿ ಪತ್ರ ನೀಡಿದ ಬೆನ್ನಲ್ಲೇ, ರಾಹುಲ್ ಗಾಂಧಿ ಸಂಸತ್ತಿನಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟಿರುವುದನ್ನು ನಾನು ನೋಡಿಲ್ಲ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ಹೇಳಿದ್ದಾರೆ.
‌ಶೋಭಾ ಕರಂದ್ಲಾಜೆ ಅವರು ಸ್ಪೀಕರ್‌ಗೆ ರಾಹುಲ್‌ ಗಾಂಧಿ ವಿರುದ್ಧ ಸಲ್ಲಿಸಿರುವ ಪತ್ರದಲ್ಲಿ ಸಂಸದೆ ಹೇಮಾಮಾಲಿನಿ ಅವರ ಸಹಿಯೂ ಇದೆ. ಅಲ್ಲದೇ, ಸ್ಪೀಕರ್ ರನ್ನು ಭೇಟಿ ಮಾಡಿದ ನಿಯೋಗದಲ್ಲಿ ಹೇಮಾ ಮಾಲಿನಿ ಕೂಡ ಇದ್ದರು.
ಇದೀಗ ರಾಹುಲ್‌ ವಿರುದ್ಧ ದೂರು ನೀಡಿದವರಲ್ಲಿ ಒಬ್ಬರಾದ ಹೇಮಾ ಮಾಲಿನಿ ಅವರೇ ರಾಹುಲ್‌ ಫ್ಲೈಯಿಂಗ್‌ ಕಿಸ್‌ ಮಾಡುವುದನ್ನು ತಾನು ನೋಡಿಲ್ಲ ಎಂದು ಹೇಳಿರುವುದು ರಾಹುಲ್‌ ವಿರುದ್ಧ ಮಾಡಿರುವ ಆರೋಪದ ಸತ್ಯಾಸತ್ಯತೆ ಬಗ್ಗೆ ಚರ್ಚೆ ಹುಟ್ಟುವಂತೆ ಮಾಡಿದೆ.
ರಾಹುಲ್‌ ಗಾಂಧಿ ಅವರು ಮಣಿಪುರದ ವಿಚಾರದಲ್ಲಿ ಮಾಡಿರುವ ಭಾಷಣದಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಮಾಡಿದ ಕುತಂತ್ರ ಇದು ಎಂದು ಹಲವರು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಭಾಷಣದ ನಂತರ ಕೇಂದ್ರ ಸಚಿವೆ ಸ್ಮೃತಿ ಪ್ರತಿಕ್ರಿಯೆ ನೀಡಲು ಮುಂದಾದಾಗ, ರಾಹುಲ್ ಗಾಂಧಿ ಹೊರನಡೆದಿದ್ದು, ಆ ವೇಳೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದಾರೆ. ‘ನನಗಿಂತ ಮೊದಲು ಮಾತನಾಡಿದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾರೆ. ಸ್ತ್ರೀ ದ್ವೇಷಿಯಾಗಿರುವ ಪುರುಷ ಮಾತ್ರ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಬಹುದು. ಇಂತಹ ಅಮಾನವೀಯ ನಡವಳಿಕೆಯನ್ನು ಸಂಸತ್ತಿನಲ್ಲಿ ಹಿಂದೆಂದೂ ಕಂಡಿರಲಿಲ್ಲ’ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆ