LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯಾವುದೇ ಕೋಚಿಂಗ್ ಸೇರದೆ UPSC ಪಾಸ್‌ ಮಾಡಿದ 23 ವರ್ಷದ ಯುವತಿ

ಉತ್ತರ ಪ್ರದೇಶ:ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಆಕಾಂಕ್ಷಿಗಳು ಐಎಎಸ್-ಐಪಿಎಸ್ ಆಗುವ ಕನಸಿನೊಂದಿಗೆ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯನ್ನ ತೆಗೆದುಕೊಳ್ಳುತ್ತಾರೆ. ಅದರಲ್ಲಿ ಸುಮಾರು ಒಂದು ಸಾವಿರ ಅಭ್ಯರ್ಥಿಗಳ ಅಂತಿಮವಾಗಿ ಆಯ್ಕೆಯಾಗುತ್ತಾರೆ. ಆದರೆ ಕೆಲವರು ಯಾವುದೇ ಕೋಚಿಂಗ್ ಇಲ್ಲದೆ ಮೊದಲ ಪ್ರಯತ್ನದಲ್ಲೇ ಯುಪಿಎಸ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಎಎಸ್ ಆಗುತ್ತಾರೆ. ಅಂತಹ ಐಎಎಸ್ ಅಧಿಕಾರಿ ಅದಿತಿ ವರ್ಷ್ಣಿ ಅವರ ಯಶಸ್ಸಿನ ಕಥೆ ಇಲ್ಲಿದೆ.

ಅದಿತಿ ವರ್ಷ್ನಿ ಉತ್ತರ ಪ್ರದೇಶದ ಬರೇಲಿ ನಿವಾಸಿ. ಅವರ ಶಾಲಾ ಶಿಕ್ಷಣವನ್ನು ಬರೇಲಿಯ ಬಿಷಪ್ ಕೊನ್ರಾಡ್ ಶಾಲೆಯಲ್ಲಿ ಮಾಡಿದ್ದಾರೆ. ಅವರ ತಂದೆ ಸ್ಥಳೀಯ ಬಟ್ಟೆ ವ್ಯಾಪಾರಿ ಮತ್ತು ತಾಯಿ ಗೃಹಿಣಿ. ವರದಿಗಳ ಪ್ರಕಾರ, ಅದಿತಿ ಯುಪಿಎಸ್‌ಸಿ ಪರೀಕ್ಷೆಗೆ ಯಾವುದೇ ಕೋಚಿಂಗ್‌ಗೆ ಸೇರದೇ ಉತ್ತೀರ್ಣರಾಗಿದ್ದಾರೆ.

ಅದಿತಿ ದೆಹಲಿ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಬಿಎ ಆನರ್ಸ್) ಪದವಿಯನ್ನು ಪಡೆದಿದ್ದಾರೆ. ಇದಾದ ನಂತರ ಅವರು ಸ್ನಾತಕೋತ್ತರ ಪದವಿಗೆ ದಾಖಲಾದರು. ಆದರೆ ಮಧ್ಯದಲ್ಲೇ ವ್ಯಾಸಂಗ ಬಿಟ್ಟು UPSCಗೆ ತಯಾರಿ ಆರಂಭಿಸಿದರು. ಅವರು ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಆಲ್ ಇಂಡಿಯಾ ರ್ಯಾಂಕ್​ನಲ್ಲಿ 57ನೇ ಸ್ಥಾನ ಪಡೆದಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್