LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

ನವದೆಹಲಿ: ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು. 2019 ರಲ್ಲಿ ಕೆನಡಾದಲ್ಲಿ ಖಾಯಂ ಪೌರತ್ವ ಪಡೆದಿದ್ದ ಉದ್ಯಮಿ ರಾಹುಲ್ ಗಗ್ಗಲ್ ಅವರನ್ನು ಸೋಮವಾರ ದೆಹಲಿಗೆ ಆಗಮಿಸುತ್ತಿದ್ದಂತೆ ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ವಿಶೇಷ ನ್ಯಾಯಾಲಯವು ರಾಹುಲ್ ಗಗ್ಗಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದಲ್ಲಿ ಪತ್ರಕರ್ತ ವಿವೇಕ್ ರಘುವಂಶಿ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಆಶಿಶ್ ಪಾಠಕ್ ಅವರನ್ನು ಕಳೆದ ಮೇಲೆ 16 ರಂದು ಸಿಬಿಐ ಬಂಧಿಸಿತ್ತು.  ಕಳೆದ ತಿಂಗಳು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸಿಬಿಐ ರಘುವಂಶಿ ಮತ್ತು ಪಾಠಕ್ ಅವರನ್ನು ಅಧಿಕೃತ ರಹಸ್ಯ ಕಾಯಿದೆಯ ಉಲ್ಲಂಘನೆ ಮತ್ತು ಸಂಬಂಧಿತ ಅಪರಾಧಗಳಲ್ಲಿ ಆರೋಪಿಗಳೆಂದು ಹೆಸರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮ