Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯದ ಗ್ರಾಮೀಣ ಜನತೆಯ ಸಮಸ್ಯೆ ಪರಿಹಾರಕ್ಕೆ ಮಹತ್ವದ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ!

ಬೆಂಗಳೂರು : ಗ್ರಾಮ ಪಂಚಾಯತಿ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣರಿಗೆ ಅನುವಾಗುವಂತೆ ಡ್ಯಾಷ್ ಬೋರ್ಡ್ ಆಧಾರಿತ ‘ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ’ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇ-ಸ್ವತ್ತು, ತೆರಿಗೆ ನಿರ್ಧರಣೆ, ಸಾಮಾಜಿಕ ಅರಣ್ಯೀಕರಣ, ಗ್ರಾ.ಪಂ.ವ್ಯಾಪ್ತಿಯ ಕೆರೆ ನಿರ್ವಹಣೆ, ಕೆರೆ ಒತ್ತುವರಿ, ಜೆಜೆಎಂ, ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿಜಿ ರಾಮ್ ಜಿ, ಗ್ರಾಮೀಣ ಆಸ್ತಿಗಳ ಸೃಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣರು ದಾಖಲಿಸಲು ಮತ್ತು ಅದಕ್ಕೆ ತಕ್ಷಣ ಸ್ಪಂದಿಸಲು ಈ ವ್ಯವಸ್ಥೆ ರೂಪಿಸಲು ನಿರ್ದೇಶನ ನೀಡಿದ್ದಾರೆ.

ರಾಜ್ಯದ ಸುಮಾರು ಅರ್ಧದಷ್ಟು ಜನಸಂಖ್ಯೆಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇರ ಸಂಪರ್ಕ ಹೊಂದಿದ್ದು, ಗ್ರಾಮೀಣರ ಕುಂದುಕೊರತೆಗೆ ಸ್ಪಂದಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇಲಾಖೆಯಲ್ಲಿ ಪಾರದರ್ಶಕತೆ ತರಲು, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆ ಕಾಮಗಾರಿಗಳಲ್ಲಿನ ಲೋಪದೋಷ, ಮೂಲಸೌಕರ್ಯ ಗುಣಮಟ್ಟ ಕೊರತೆ, ಗ್ರಾ.ಪಂ. ಒದಗಿಸುವ ವಿವಿಧ ಸೇವೆಗಳಲ್ಲಿನ ವಿಳಂಬ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಚಿವಾಲಯಕ್ಕೆ ದೂರುಗಳು ಬರುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು, ಗ್ರಾಮೀಣರು ಈ ಸಂಬಂಧ ವಿಡಿಯೋ ಮತ್ತು ಫೋಟೋ ಸಹಿತ ದೂರು ದಾಖಲಿಸಲು ಮತ್ತು ಈ ದೂರಿಗೆ ಸಂಬಂಧಿಸಿದಂತೆ ಕ್ರಮ ವಹಿಸುವ ಅಧಿಕಾರಿಯ ದೂರವಾಣಿ, ಹೆಸರು ಇತ್ಯಾದಿ ಮಾಹಿತಿ ಪಡೆಯಲು ಮತ್ತು ದೂರಿನ ಸ್ಥಿತಿಗತಿ ಅರಿಯಲು ಮಿಗಿಲಾಗಿ ನಿಗದಿತ ಕಾಲಮಿತಿಯಲ್ಲಿ ದೂರುಗಳನ್ನು ಇತ್ಯರ್ಥಪಡಿಸಲು ಅನುವಾಗುವಂತೆ ಸರಳ ಪ್ರಕ್ರಿಯೆಯ ಆಪ್ ಮತ್ತು ಡ್ಯಾಷ್ ಬೋರ್ಡ್ ಸಹಿತ ವೆಬ್ ಪೋರ್ಟಲ್ ಅಭಿವೃದ್ಧಿ ಪಡಿಸಲು ಕ್ರಮ ವಹಿಸುವಂತೆ ಈಶ್ವರ ಖಂಡ್ರೆ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ಜಿಬಿಎ, ಬಿಡಬ್ಲ್ಯುಎಸ್ಎಸ್.ಬಿ, ಬಿಡಿಎ, ಬಿಎಂ.ಆರ್.ಸಿ.ಎಲ್, ಬೆಸ್ಕಾಂ ಮೊದಲಾದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಿ ಪರಿಹಾರ ಪಡೆಯಲು https://nammabengaluru.org.in/ ಮತ್ತು Sahaaya ಆಪ್ ನಿರ್ಮಿಸಿರುವ ಮಾದರಿಯಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ವಿಭಾಗಗಳ ಬಗ್ಗೆ ದೂರು ದಾಖಲಿಸಲು ಏಕ ಗವಾಕ್ಷಿ ಯೋಜನೆ ಜಾರಿಗೆ ತರುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಗ್ರಾಮೀಣ ಜನತೆಯ ಸಮಸ್ಯೆ ಪರಿಹಾರಕ್ಕೆ ಮಹತ್ವದ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ!BREAKING : 'KPSC' ಹಗರಣ : IAS ಅಧಿಕಾರಿ ಜ್ಞಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆ ಸೆ.10 ರವರೆಗೆ CID ಕಸ್ಟಡಿಗೆ!BIG NEWS : ಬೆಂಗಳೂರಲ್ಲಿ 'ಆಪರೇಷನ್ ಮುಕ್ತ 2.O': ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರುBIG NEWS : ಪೋಸ್ಟಿಂಗ್ ಡೀಲ್ ಬಗ್ಗೆ ಕಾನ್ಫರೆನ್ಸ್ ಕಾಲ್ ಆಡಿಯೋ ವೈರಲ್ ಕೇಸ್ : ಉತ್ತರಕನ್ನಡದ ಮೂವರು PSI ಸಸ್ಪೆಂಡ್!ಮಂಗಳೂರಲ್ಲಿ ಭೀಕರ ಮರ್ಡರ್ : ಕೇವಲ ಮೊಬೈಲ್ ಗೋಸ್ಕರ ಚಾಕುವಿನಿಂದ ಇರಿದು ಅಣ್ಣನನ್ನೇ ಕೊಂದ ತಮ್ಮ!BIG NEWS : 'KPSC' ಹಗರಣಕ್ಕೂ ನನಗೂ ಏನು ಸಂಬಂಧ : HD ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!BREAKING : 'KPSC' ಹಗರಣ : ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದೆ ಜ್ಞಾನೇಂದ್ರ ಕುಮಾರ್ : 'CID' ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು!BREAKING : ಇಂಜಿನಿಯರ್ ಗಳ ನೇಮಕಾತಿಯಲ್ಲಿ ಭಾಗಿಯಾಗಿದ್ದರೆ ರಾಜಕೀಯ ನಿವೃತ್ತಿ : ಸಚಿವ ಪ್ರಿಯಾಂಕ್ ಖರ್ಗೆ ಸವಾಲು!ಹಾಸನದಲ್ಲಿ ಜಾತ್ರಾ ಮಹೋತ್ಸವದ ವಿಚಾರವಾಗಿ 2 ಗುಂಪುಗಳ ನಡುವೆ ಮಾರಾಮಾರಿ : 6 ಜನರಿಗೆ ಗಾಯ!BREAKING : 'KPSC' ಹಗರಣಕ್ಕೆ ಬಿಗ್ ಟ್ವಿಸ್ಟ್ : ಶಾಸಕ ಅಶ್ವಥ್ ನಾರಾಯಣ ಆಪ್ತ, ಬಿಜೆಪಿ ಮುಖಂಡನೇ ಕಿಂಗ್ ಪಿನ್?!