LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆ ನಿರ್ಮಾಣಕ್ಕೆ ವಿರೋಧ: ಮಹಿಳೆಯರನ್ನ ಜೀವಂತ ಸಮಾಧಿ ಮಾಡಲು ಮುಂದಾಗಿದ್ದ ದುಷ್ಕರ್ಮಿಗಳು.. !

ಭೋಪಾಲ್ : ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಟ್ರಕ್ ನಿಂದ ಜಲ್ಲಿಕಲ್ಲು ಮಣ್ಣು ಸುರಿದು ಭಾಗಶಃ ಸಮಾಧಿ ಮಾಡಿದ ಘಟನೆ ನಡೆದಿದೆ.

ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೊರೊಟ್ ಗ್ರಾಮದಲ್ಲಿ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಾಣವನ್ನು ವಿರೋಧಿಸುತ್ತಿದ್ದ ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಎಂಬ ಮಹಿಳೆಯರನ್ನು ಕುತ್ತಿಗೆಯವರೆಗೆ ಹೂಳಲಾಗಿತ್ತು. ಈ ಘಟನೆಯ ವೀಡಿಯೊದಲ್ಲಿ ಇಬ್ಬರು ಮಹಿಳೆಯರು ಜಲ್ಲಿ ತುಂಬಿದ ಟ್ರಕ್ ನ ಹಿಂದೆ ಕುಳಿತಿರುವುದನ್ನು ತೋರಿಸಲಾಗಿದೆ. ನಂತರ ಅವರನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಸದ್ಯ ಮಹಿಳೆಯರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಆರೋಗ್ಯ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದು, ಇತರ ಇಬ್ಬರು ಇನ್ನೂ ಪರಾರಿಯಾಗಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಜೈದೀಪ್ ಪ್ರಸಾದ್, ಇದು ಭೂ ವಿವಾದದ ಕುಟುಂಬ ವಿಷಯವಾಗಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!ಏರೋ ಇಂಡಿಯಾ 2025: ಪೊಲೀಸರಿಗಿನ್ನು ಆಹಾರ ಸರಬರಾಜು ಹೊಣೆ ಇಸ್ಕಾನ್‌ ಗೆ…!