LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜ್ಯದಲ್ಲಿ 6 ಲಕ್ಷ ಎಕರೆಯನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಮುಂದಾಗಿದೆ'- ಯತ್ನಾಳ್

ಬೆಂಗಳೂರು : ಕರ್ನಾಟಕದಲ್ಲಿ 6 ಲಕ್ಷ ಎಕರೆಯನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ದೊಡ್ಡ ಅನ್ಯಾಯ. ರೈತರು, ಮಠಗಳು ಸೇರಿ ಎಲ್ಲರಿಗೂ ಇದರಿಂದ ಸಮಸ್ಯೆಯಾಗಿದೆ. ವಕ್ಫ್ ಟ್ರಿಬ್ಯುನಲ್ ರದ್ದಾಗಬೇಕು. ವಕ್ಫ್ ಟ್ರಿಬ್ಯುನಲ್ ಒಂದು ಶಾಪ ಆಗಿದೆ. ಹೀಗಾಗಿ, ನ್ಯಾಯಾಲಯದ ಮೂಲಕವೇ ಎಲ್ಲವೂ ಇತ್ಯರ್ಥವಾಗಬೇಕು. ಈಗ 2,700 ಎಕರೆ ಜಾಗ ಖಬರ್ ಸ್ತಾನಗೆ ಕೊಡೋಕೆ ಸರ್ಕಾರ, ಕಂದಾಯ ಇಲಾಖೆ ನಿರ್ಣಯ ಮಾಡಿದೆ. ವಕ್ಫ್‌ಗೆ ಎಷ್ಟು ಜಾಗ ತಗೋಬೋದು ಅಂತಾ ಅವರು ಲೀಸ್ಟ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಅವರು ಧಮ್ಕಿ ಹಾಕುತ್ತಿದ್ದಾರೆ. ನಾವು ಅಭಿಯಾನ ಮಾಡಿ ಮಾಹಿತಿ ಪಡೆದು ಜೆಪಿಸಿಗೆ ವರದಿ ಕೊಡ್ತೀವಿ. ಜನಜಾಗೃತಿಗಾಗಿ ಈ ಅಭಿಯಾನ ಮಾಡ್ತಿದ್ದೇವೆ. ರಾಜ್ಯ, ಕೇಂದ್ರ ಸರ್ಕಾರ ಎರಡಕ್ಕೂ ನಾವು ಈ ಒತ್ತಾಯ ಮಾಡ್ತಿದ್ದೇವೆ. ಜಮೀರ್ ಬಂದು ಭಾಷಣ ಮಾಡ್ತಾರೆ. ಸೌತಾನ್ ಅಂತ ಮಾತಾಡಿ ಪ್ರಚೋದನೆ ಮಾಡ್ತಾರೆ. ಅಧಿಕಾರಿಗಳಿಗೆ ಧಮ್ಕಿ ಹಾಕಿ ನೋಟಿಸ್ ಕೊಡಿ ಜಮೀರ್ ಹೇಳ್ತಿದ್ದಾರೆ. ಅಧಿಕಾರಿಗಳು ಭಯ ಬಿದ್ದಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರದ ನಿರ್ಧಾರ ಆಗೋವರೆಗೂ ನೀವು ಯಾವುದೇ ದಾಖಲಾತಿ ಮಾಡಬೇಡಿ ಅಂತಾ ಅಧಿಕಾರಿಗಳಿಗೆ ಸೂಚನೆ ಕೊಟ್ಡಿದ್ದೇವೆ ಎಂದರು.

ವಕ್ಫ್ ಟ್ರಿಬ್ಯುನಲ್ ರದ್ದು ಆಗಬೇಕು ಅನ್ನೋದು ನಮ್ಮ ಮೊದಲ ಬೇಡಿಕೆ. ಇದು ಆಗಲೇಬೇಕು. ಹೀಗಾಗಿ, ಜನ ಜಾಗೃತಿ ಅಭಿಯಾನ ಮಾಡ್ತಿದ್ದೇವೆ. ನೋಟಿಸ್ ಕೊಟ್ಟು ಕೆಲವು ಈಗ ವಾಪಸ್ ಪಡೆದಿದ್ದಾರೆ. ಆದರೆ, ಅನೇಕ ಕಡೆ ನೋಟಿಸ್ ಕೊಡದೇ ದಾಖಲಾತಿ ವಕ್ಫ್ ಮಾಡಿದ್ದಾರೆ. ಬಿಜೆಪಿ ಪಕ್ಷದಿಂದಲೇ ಇದರ ವಿರುದ್ಧ ಹೋರಾಟ ಎಂದು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!