LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್

ಮಂಗಳೂರು :  ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ಪೆಲ್ ಹೇಳಿದ್ದಾರೆ.

ಪ್ರತಿ ಮನೆ ಮನೆಗೆ ವಿತರಿಸಲ್ಪಡುವ ಮಂತ್ರಾಕ್ಷತೆಯನ್ನು ಬಹಳ ಶ್ರದ್ಧಾ ಭಕ್ತಿಯಿಂದ ಕುಟುಂಬದ ಸದಸ್ಯರೊಂದಿಗೆ ಸ್ವೀಕರಿಸಬೇಕು. ಮಂತ್ರಾಕ್ಷತೆಯೊಂದಿಗ ಶ್ರೀ ರಾಮ ದೇವರ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ಪತ್ರವನ್ನು ನೀಡಲಿದ್ದಾರೆ. ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರು ಕೂಡ ಹಣವನ್ನು ನೀಡಿವಂತಿಲ್ಲ. ಯಾವುದೇ ಹಣವನ್ನು ಅಥವಾ ಯಾವುದೇ ವಸ್ತು ರೂಪದಲ್ಲಿ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ ,ಕಟ್ಟು ಪಾಡು ,ನಿಯಮಗಳು ಇರುವುದಿಲ್ಲ. ಮತ್ತು ಜನವರಿ 22ರಂದು ದೇವಸ್ಥಾನ ಮಠ ಮಂದಿರಗಳಲ್ಲಿ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ ಸತ್ಸಂಗ, ಭಜನೆ , ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ ಕೇಂದ್ರಗಳಲ್ಲಿ ನಡೆಯಲಿದೆ. ಆ ದಿನ ಸಂಜೆ ವೇಳೆ ಪ್ರತಿ ಮನೆಯಲ್ಲಿ ಕನಿಷ್ಠ 5 ದೀಪಗಳನ್ನು ಉರಿಸಿ ,ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಉತ್ತರದ ಕಡೆಗೆ ಮುಖ ಮಾಡಿ ಆರತಿ ಮಾಡಬೇಕು ಈ ಮೂಲಕ ಆ ದಿನವನ್ನು ಸಂಭ್ರಮಿಸಬೇಕೆಂದು ಟ್ರಸ್ಟ್ ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ಆರೋಗ್ಯಕ್ಕೆ ಸಿಗುವ ಲಾಭಗಳು