LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭ

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ, ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯಲಿದೆ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಮೊದಲ ಎರಡು ಹಂತಗಳ ಮತದಾನ ಮುಗಿದ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ.

ಮೂರನೇ ಹಂತದಲ್ಲಿ 10 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 94 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕ, ಕೇರಳ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸಹಿತ ಪ್ರಮುಖ ರಾಜ್ಯಗಳಲ್ಲಿ 3 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಎರಡನೇ ಹಂತದ ಮತದಾನದಲ್ಲಿ ರಾಜ್ಯದಲ್ಲಿ ಈಗಾಗಲೇ 14 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಇಂದು ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

 

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಬೆಳಗಾವಿ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳು ಭಾರಿ ಕುತೂಹಲ ಕೆರಳಿಸಿರುವ ಕ್ಷೇತ್ರಗಳಾಗಿವೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ನಿಂತಿರುವ ಕಾರಣ, ಬಿಜೆಪಿ ಗೆಲುವು ಕಷ್ಟವಾಗುತ್ತಾ ಎನ್ನುವ ಕುತೂಹಲ ಇದೆ.

 

ಶ್ರೀರಾಮುಲು (ಬಳ್ಳಾರಿ), ಜಗದೀಶ್ ಶೆಟ್ಟರ್ (ಬೆಳಗಾವಿ), ಪ್ರಿಯಾಂಕ ಜಾರಕಿಹೊಳಿ (ಚಿಕ್ಕೋಡಿ), ವಿಶ್ವೇಶ್ವರ ಹೆಗಡೆ ಕಾಗೇರಿ (ಉತ್ತರ ಕನ್ನಡ), ಬಸವರಾಜ ಬೊಮ್ಮಾಯಿ (ಹಾವೇರಿ), ಬಿವೈ ರಾಘವೇಂದ್ರ (ಶಿವಮೊಗ್ಗ) ಕಣದಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆ ಜನ ಸಾಗರವೋ ಸಾಗರ.!ಮಹಾಲಯ ಅಮಾವಾಸ್ಯೆ ಮುಗಿದ ನಂತರ ಈ ರಾಶಿಗಳಿಗೆ ಭಾರಿ ಅದೃಷ್ಟವಚನ:    -- -ಸಿದ್ಧರಾಮೇಶ್ವರ .!ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿಎಂ ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್ ಅಶೋಕ್ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ.!21 ಮಕ್ಕಳ ಮೇಲೆ ಮೇಲೆ ರೇಪ್ : ಪೋಕ್ಸೋ ಕೇಸ್‌ನಲ್ಲಿ ಹಾಸ್ಟೆಲ್ ವಾರ್ಡನ್‌ಗೆ ದೇಶದಲ್ಲೇ ಮೊದಲ ಗಲ್ಲು ಶಿಕ್ಷೆ..!ಸಚಿವ ಜಮೀರ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಮಂಗಳೂರು: ಹೊತ್ತಿ ಉರಿದ BMW ಕಾರು..!ಮಸೀದಿ ಎದುರು “ಭಾರತ್ ಮಾತಾ ಕೀ ಜೈ” ಘೋಷಣೆ ಅಪರಾಧವಲ್ಲ ಎಂದ ಹೈಕೋರ್ಟ್‌ !! ಹಾಗಾದ್ರೆ ಹೈಕೋರ್ಟ್‌ ಆದೇಶದಲ್ಲಿ ಏನಿದೆ..?ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..