LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯಪಾಲರ ವಿರುದ್ಧ ಕುರುಬ ಸಮುದಾಯದ ಪ್ರತಿಭಟನೆ

ಬೆಂಗಳೂರು : ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಮುಡಾ ವಿಚಾರಣೆ ವಚಾರವಾಗಿ ಆದೇಶ ಹೊರಬೀಳುತ್ತಿದ್ದಂತೆ ನಾಡಿನೆಲ್ಲೆಡೆ ಸಿಎಂ ಪರ ವಿರೋಧ ಮಾತುಗಳು ಕೇಳಿಬರುತ್ತಿದೆ.

ಇದರ ಜೊತೆಗೆ ಇದೀಗ ಬೆಂಗಳೂರು ನಗರದಲ್ಲಿ, ಮೈಸೂರಿನಲ್ಲಿ, ಚಿಕ್ಕಮಗಳೂರಿನಲ್ಲಿ ರಾಜ್ಯಪಾಲರ ವಿರುದ್ಧವಾಗಿ ಕುರುಬ ಸಮುದಾಯ ಪ್ರತಿಭಟನೆಗೆ ಮುಂದಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಅನುಮತಿ ಕೊಟ್ಟಿದ್ದೇ ತಡ ರಾಜ್ಯಪಾಲರ‌ ವಿರುದ್ಧ ಕುರುಬ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಕುರುಬರ ಸಂಘದ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ.

ಸಿಎಂ ತವರಾದ ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆ ಎಂದು ಘೋಷಣೆ ಕೂಗಲಾಗುತ್ತಿದೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನ ನ್ಯಾಯಾಲಯದ ಮುಂಭಾಗ ಸೇರಿರುವ ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಪಟ್ಟುಬಿಡದೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಸ್ಥಳದಲ್ಲಿ ಮಾನವ ಸರಪಳಿ ರಚನೆ ಮಾಡಿ ಅಂಗಿ ಬಿಚ್ಚಿ ಅರೆಬೆತ್ತಲೆಯಾಗಿ‌‌ ಪ್ರದರ್ಶನ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಚಿಕ್ಕಮಗಳೂರಿನಲ್ಲೂ ಕುರುಬ ಸಮುದಾಯದ ಹಲವರು ಪ್ರತಿಭಟನೆ ಮಾಡುತ್ತಿದ್ದಾರೆ. ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಟ್ಟಣದ ಗಾಂಧಿ ವೃತದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಸಿಎಂ ವಿರುದ್ಧ ಇದು ಷಡ್ಯಂತರದ ಪ್ರಕರಣ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯು