ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ.
https://bcsuddi.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b3%81-%e0%b2%ac%e0%b2%9c%e0%b3%86%e0%b2%9f%e0%b3%8d-%e0%b2%af%e0%b2%be%e0%b2%b5%e0%b3%8d%e0%b2%af%e0%b2%be%e0%b2%b5-%e0%b2%87%e0%b2%b2%e0%b2%be/
ಇನ್ನು 3.24 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್ ಮಂಡಿಸುತ್ತಿದ್ದು, ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.