LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ - ಇಂದು ರಾಜ್ಯ ರಾಜಧಾನಿ ಬಂದ್ ಏನಿರುತ್ತೆ? ಏನಿರಲ್ಲ?

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸದೇ ಆಟ ಆಡುತ್ತಿರುವ ಸಾರಿಗೆ ಇಲಾಖೆ ವಿರುದ್ಧ ಖಾಸಗಿ ‌ಸಾರಿಗೆ ಸಂಘಟನೆ ಸಿಡಿಮಿಡಿಗೊಂಡಿದೆ. ಸರ್ಕಾರಕ್ಕೆ ಮನವಿ ಮಾಡಿ ಸಾಕಾಗಿದೆ. ಹೀಗಾಗಿ, ಇಂದು ಬೆಂಗಳೂರು ಬಂದ್ ಮಾಡುತ್ತಿದ್ದೇವೆ ಎಂದು ಹಲವು ಚಾಲಕರ ಒಕ್ಕೂಟ ಹೇಳಿವೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ಸೆಡ್ಡು ಹೊಡೆಯಲು ಸಿದ್ಧವಾಗಿವೆ. ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಸಾರಿಗೆ ಸಂಘಟನೆಗಳಿಂದ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿವೆ. ಆಟೋ ಚಾಲಕರಿಗೆ ಕ್ಯಾಬ್ ಚಾಲಕರು, ಶಾಲಾ ವಾಹನಗಳ ಚಾಲಕರು ಕೂಡ ಸಾಥ್ ನೀಡಲಿದ್ದಾರೆ. ನೆಲಮಂಗಲ, ಕೆಂಗೇರಿ, ವೈಟ್ ಫೀಲ್ಡ್, ಕೆ ಆರ್ ಪುರ, ಆನೇಕಲ್ ಭಾಗದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್​ ಬಳಿ ಆಗಮಿಸಲಿದ್ದಾರೆ. ಈಗಾಗಲೇ ಖಾಸಗಿ ಸಾರಿಗೆ ಸಂಘಟನೆಗಳಿಂದ ಸದಸ್ಯರಿಗೆ ರೂಟ್ ಮ್ಯಾಪ್ ತಲುಪಿದೆ. ಪ್ರಮುಖ ಬೇಡಿಕೆಗಳೇನು? – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು – ಚಾಲಕರಿಗೆ ವಸತಿ ಯೋಜನೆ ನೀಡಬೇಕು ಏನೆಲ್ಲಾ ಇರಲ್ಲ? ಆಟೋ, ಖಾಸಗಿ ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್, ಗೂಡ್ಸ್ ವಾಹನ ಏನೆಲ್ಲಾ ಇರುತ್ತೆ? ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಸರ್ಕಾರಿ ಟ್ಯಾಕ್ಸಿ (ಕೆಎಸ್‌ಟಿಡಿಸಿ), ರೈಲು, ಖಾಸಗಿ ಶಾಲೆ, ಚಿತ್ರರಂಗದ ಚಟುವಟಿಕೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!