LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರ ವೆಂಟಿಲೇಷನ್ನಲ್ಲಿದೆ.! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ.!

 

ಚಿತ್ರದುರ್ಗ: ಸರ್ಕಾರ ಇದ್ದಷ್ಟು ದಿನ ಸಿಎಂ ಕಾಸು ಮಾಡಿಕೊಂಡು ಹೋಗಬಹುದು ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಕೈ ಶಾಸಕರೇ ಮಾತಾಡುತ್ತಿದ್ದಾರೆ ಸಿದ್ಧರಾಮಯ್ಯ ಮಾತು ಆಡಳಿತದಲ್ಲಿ ನಡೆಯುತ್ತಿಲ್ಲ ಡಿಕೆಶಿ ಆಡಿದ್ದೇ ಆಟ ಎಂಬ ಸ್ಥಿತಿ ನಿರ್ಮಾಣಾಗಿದೆ ರಾಜ್ಯ ಸರ್ಕಾರ ವೆಂಟಿಲೇಷನ್ನಲ್ಲಿದೆ ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಸಿಎಂ ಸಿದ್ಧರಾಮಯ್ಯ ಜೀವನ ತೆರೆದ ಪುಸ್ತಕ ಎಂದು ಹೇಳುತ್ತಾರೆ ಸಚಿವ ಜಮೀರ್ ಅಹ್ಮದ್ ತೆರೆದೆ ದುಡ್ಡು ಹಂಚುತ್ತಿದ್ದಾನೆ ವಯನಾಡ್ಗೆ ಅಕ್ಕಿ ಹೋಗಿದ್ದು ತೆರೆದೆ ಹಂಚಿದ್ದಾರೆ ಪ್ರಧಾನಿಗೆ ಮಾಹಿತಿ ಇರಲ್ವಾ, 700ಕೋಟಿ ಹಣ ಮಾಹಾರಾಷ್ಟ್ರಕ್ಕೆ ಹೋಗಿದೆ ಕಾಂಗ್ರೆಸ್ ನಾಯಕರು ಸಾಕ್ಷಿಗುಡ್ಡೆ  ಕೇಳುತ್ತಾರೆಂದು ವ್ಯಂಗ್ಯವಾಡಿ ಭ್ರಷ್ಟಾಚಾರದ ಬಗ್ಗೆ ರಾಜ್ಯಪಾಲರಿಗೆ, ಸಿಎಂಗೆ ದೂರು ನೀಡಿದ್ದಾರೆ.

ಕಮಿಷನರ್, ಡಿಸಿಗೆಷ್ಟು ರೇಟ್ ಎಂದು ಡಿಟೇಲಾಗಿ ದೂರು ನೀಡಿದ್ದಾರೆ ತೆರೆದ ಪುಸ್ತಕದ ಅಕೌಂಟನ್ನೆಲ್ಲಾ ದೂರಲ್ಲಿ ತೋರಿಸಿದ್ದಾರೆ ಬಾರ್ ಮಾಲೀಕರು ಪ್ರತಿಭಟನೆಗೆ ಕರೆ ನೀಡಿದ್ದಾರೆ ರಾಜ್ಯದಲ್ಲಿ ವೈನ್ ಸ್ಟೋರ್, ಬಾರ್, ಪಬ್ ಗೆ ದರ ನಿಗದಿ ಮಾಡಿದ್ದಾರೆ ಚುನಾವಣೆಗಾಗಿ ವಾರದಲ್ಲಿ 900ಕೋಟಿ ಸಂಗ್ರಹಿಸಿದ್ದಾರೆ ವಾರದಲ್ಲೇ 18ಕೋಟಿ ಸಂಗ್ರಹಿಸಿ ದಾಖಲೆ ಬರೆದಿದ್ದಾರೆ ಇಲಾಖೆಯ ಪ್ರಳಯಾಂತಕ ಅಧಿಕಾರಿಗಳಿಗೆ ಶಹಭ್ಭಾಷ್ ಗಿರಿ ಕೊಡಬೇಕು ಎಂದರು.

ಹುಟ್ಟಿದರೂ ಎಸ್ಐಟಿ, ಸತ್ತರೂ ಎಸ್ಐಟಿ,ಮದುವೆಗೊಂದು ಎಸ್ಐಟಿ ಎಸ್ಐಟಿ ಮೂಲಕ ತನಿಖೆ ಮಾಡಿ ಮುಚ್ಚಿ ಹಾಕಿ ಎಂದು ಕಿಡಿ ಕಾರಿದ್ದು,ಕೆಂಪಣ್ಣ ದೂರು ಕೊಟ್ಟಾಗ ಸಿದ್ಧರಾಮಯ್ಯ ಪಂಚೆ ಎತ್ತಿ ಊರೂರು ತಿರುಗಿದ್ದರುನಾವು ದಾಖಲೆ ಇದ್ದರೆ ಕೊಡಪ್ಪ ಎಂದು ಕೆಂಪಣ್ಣನ ಕೇಳಿದ್ದೆವುಬದುಕಿರೋವರೆಗೂ ಕೆಂಪಣ್ಣ ದಾಖಲೆ ತಂದು ಕೊಡಲಿಲ್ಲ ಈಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ.60ದೂರು ದಾಖಲಾಗಿದೆ ಮನೆಹಾಳು ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಕ್ಕೆ ದುಡ್ಡಿಲ್ಲ ಶಾಸಕರು, ಮಂತ್ರಿಗಳಿಗೆ ಯಾವುದೇ ಹಣ ಬರದೆ ಬಕಪಕ್ಷಿಗಳಿಂತೆ ಕಾದಿದ್ದಾರೆ ವರ್ಗಾವಣೆ ದಂಧೆ ಮೂಲಕ ಹಣ ಮಾಡುತ್ತಿದ್ದಾರೆ ಕರ್ನಾಟಕ ಎಟಿಎಂ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ರಾಜ್ಯದ ಹಣ ಬೇರೆ ರಾಜ್ಯಗಳಿಗೆ ಹಣ ಕಳಿಸುತ್ತಿದ್ದಾರೆ ಎಂದು ಆಶೋಕ್ ದೂರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಜಿಲ್ಲಾಧ್ಯಕ್ಷರಾದ ಎ.ಮುರಳಿ, ಪ್ರಧಾನ ಕಾರ್ಯದರ್ಶೀ ಸಂಪತ್, ಕುಮಾರ್ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜನ್, ವಕ್ತಾರ ನಾಗರಾಜ್ ಬೇದ್ರೇ ಕಚೇರಿ ಕಾರ್ಯದರ್ಶಿ ಶಂಭು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!