LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ ಬರಲಿದೆ 16 ಪವಿತ್ರ ನದಿಗಳ ನೀರು

ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ನೆರವೇರಲಿದೆ. ವಿಶೇಷವೇನೆಂದರೆ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ.

2024ರ ಜನವರಿ 22ರಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಮ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ.

ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ ನೀರನ್ನು ತರಿಸಿರುವುದು ವಿಶೇಷವಾಗಿದೆ.

ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ಏಕೆ ತರಿಸಲಾಗಿದೆ ಎಂದರೆ ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದರು. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ. ಈಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನೆಯಾಗುತ್ತಿದ್ದು ಬಾಲರಾಮನ ಅಭಿಷೇಕಕ್ಕೆ ಸೀತಾಮಾತೆಯ ತವರು ನೇಪಾಳದಿಂದ ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ

ಸಪ್ತಕೋಶಿ, ನಾರಾಯಿಣಿ, ಮಹಾಕಾಳಿ, ಕಾಳಿ ಗಂಡಕಿ, ಗಂಗಾ ಸಾಗರ್, ಬಾಗ್ಮತಿ, ಕಮಲಾ ನದಿಗಳು ಸೇರಿದಂತೆ 16 ಪವಿತ್ರ ನದಿಗಳ ನೀರನ್ನು ಶ್ರೀರಾಮನ ಅಭಿಷೇಕಕ್ಕಾಗಿ ತರಿಸಲಾಗಿದೆ. ನೇಪಾಳದಲ್ಲಿರುವ ರಾಮಭಕ್ತರ ಸಮಿತಿ ಮೂಲಕ ನೀರನ್ನು ಸಂಗ್ರಹಿಸಿ ಭಾರತಕ್ಕೆ ತರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ'- ಅಮಿತ್‌ ಶಾಬಿಬಿಎಂಪಿ ಅಧಿಕಾರಿಗಳಿಂದ ಮಹಾ ಎಡವಟ್ಟು - ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಎಂ ಬದಲು BSY ಫೋಟೋ ಬಳಕೆರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾಮೋದಿ 3.02 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆBreaking News: ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್..!ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?