LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಹುಲ್ ಗೆ ಸದ್ಯಕ್ಕಿಲ್ಲ ರಿಲೀಫ್: ಮೋದಿ ಉಪನಾಮ ಕೇಸ್ ನ ಕುರಿತು ಆಗಸ್ಟ್​ 4ರಂದು ವಿಚಾರಣೆ ಎಂದ ಸುಪ್ರೀಂ

ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರು ತಮಗೆ ಸೂರತ್​​ ಕೋರ್ಟ್ ನೀಡಿದ್ದ 2 ವರ್ಷ ಜೈಲು ಶಿಕ್ಷೆ ಆದೇಶವನ್ನು ತಡೆ ನೀಡುವಂತೆ ಗುಜರಾತ್​ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್​ 4ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಹೇಳಿದೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​ ಕೋರ್ಟ್​​​ ರಾಹುಲ್​​ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು. ಆದರೆ ರಾಹುಲ್​​ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್​ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಗುಜರಾತ್​ ಹೈಕೋರ್ಟ್​​ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರು ಜುಲೈ 15ರಂದು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.
ಡಾ. ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ ರಾಹುಲ್ ಗಾಂಧಿ ಪರ ವಾದ ಮಂಡಿಸಿದ್ದಾರೆ. ಈ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಜುಲೈ 21ರಂದು ವಿಚಾರಣೆ ನಡೆಸುದಾಗಿ ತಿಳಿಸಿದರು. ಇದೀಗ ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ ಎಂದು ಡಾ. ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಗುಜರಾತ್​​ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್​​ ನೀಡಿದ್ದು, 10 ದಿನದ ಒಳಗೆ ಉತ್ತರ ನೀಡುವಂತೆ ತಿಳಿಸಿದೆ. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್​​ ಗಾಂಧಿಯವರ ಮೋದಿ ಉಪನಾಮದ ಬಗ್ಗೆ ಭಾಷಣ ಮಾಡಿದ್ದರು. ಅವರು ತಮ್ಮ ಭಾಷಣದಲ್ಲಿ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ, ಇಬ್ಬರೂ ಭಾರತದಲ್ಲಿ ಬೇಕಾಗಿರುವ ಪ್ರಮುಖ ಉದ್ಯಮಿಗಳು, ದೇಶಕ್ಕೆ ದ್ರೋಹ ಮಾಡಿ ಪರಾರಿಯಾಗಿದ್ದಾರೆ. ಈ “ಮೋದಿ” ಎಂಬ ಉಪನಾಮವು ಕಳ್ಳರಲ್ಲಿ ಸಾಮಾನ್ಯವಾಗಿದೆ ಎಂಬ ಹೇಳಿಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸುಗಳ ಹಸಿರು ಮೇವಿನ ಕೊಠಡಿ ಸ್ಥಾಪಿಸುವುದು ಹೇಗೆ ಗೊತ್ತಾ...? ಇಲ್ಲಿದೆ ನೋಡಿ'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು