LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ವೆಜ್ ಬಿರಿಯಾನಿ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಎಣ್ಣೆ- ಸ್ವಲ್ಪ

  • ಕಾಳುಮೆಣಸು- ಸ್ವಲ್ಪ

  • ಚಕ್ಕೆ, ಲವಂಗ-ಸ್ವಲ್ಪ

  • ಈರುಳ್ಳಿ- 1

  • ಬೆಳ್ಳುಳ್ಳಿ-ಸ್ವಲ್ಪ

  • ಶುಂಠಿ-ಸ್ವಲ್ಪ

  • ಕೊತ್ತಂಬರಿ-ಸ್ವಲ್ಪ

  • ಪುದೀನಾ-ಸ್ವಲ್ಪ

  • ಹಸಿಮೆಣಸಿನ ಕಾಯಿ- 4

  • ಕ್ಯಾರೆಟ್- 2 (ಸಣ್ಣಗೆ ಕತ್ತರಿಸಿಕೊಂಡಿದ್ದು)

  • ಬೀನ್ಸ್-  ಸ್ವಲ್ಪ (ಸಣ್ಣಗೆ ಕತ್ತರಿಸಿಕೊಂಡಿದ್ದು)

  • ಬಟಾಣಿ ಅಥವಾ ಅವರೆಕಾಳು- ಸ್ವಲ್ಪ

  • ಅಕ್ಕಿ- 1 ಬಟ್ಟಲು

  • ಪಲಾವ್ ಎಲೆ- ಸ್ವಲ್ಪ

  • ಏಲಕ್ಕಿ- 2

  • ಸೋಂಪು-ಸ್ವಲ್ಪ

  • ಕಸೂರಿಮೇಥಿ-ಸ್ವಲ್ಪ

  • ಜೀರಿಗೆ- ಅರ್ಧ ಚಮಚ

  • ತುಪ್ಪ- 1 ಚಮಚ

  • ಉಪ್ಪು- ರುಚಿಗೆ ತಕ್ಕಷ್ಟು

  • ಅಚ್ಚಖಾರದ ಪುಡಿ- ಕಾಲು ಚಮಚ

  • ಬಿರಿಯಾನಿ ಮಾಸಾಲಾ ಪುಡಿ- ಒಂದು ಚಮಚ

  • ಮೊಸರು- 3 ಚಮಚ

  • ಅರಿಶಿಣದ ಪುಡಿ- ಅರ್ಧ ಚಮಚ







ಮಾಡುವ ವಿಧಾನ...






  • ಮೊದಲು ಒಲೆಯ ಮೇಲೆ ಬಾಣಲೆ ಇಟ್ಟು, ಅದಕ್ಕೆ ಎಣ್ಣೆ ಹಾಕಿ. ಕಾದ ನಂತರ ಕಾಳುಮೆಣಸು, ಚಕ್ಕೆ, ಲವಂಗ, ಈರುಳ್ಳಿ (ಅರ್ಧ), ಬೆಳ್ಳುಳ್ಳಿ, ಶುಂಠಿ, ಕೊತ್ತಂಬರಿ, ಪುದೀನಾ, ಹಸಿಮೆಣಸಿನ ಕಾಯಿ ಹಾಕಿ ಕೆಂಪಗೆ ಹುರಿದುಕೊಳ್ಳಿ. ಬಳಿಕ ಇದನ್ನು ಮಿಕ್ಸಿ ಜಾರ್'ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ

  • ಇದೀಗ ಒಲೆಯ ಮೇಲೆ ಕುಕ್ಕರ್ ಇಟ್ಟು, ಅದಕ್ಕೆ ತುಪ್ಪ ಹಾಕಿ. ಕಾದ ನಂತರ ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ, ಸೋಂಪು, ಕಸೂರಿಮೇಥಿ, ಜೀರಿಗೆ ಹಾಕಿ. ನಂತರ ಕತ್ತರಿಸಿಕೊಂಡ ಈರುಳ್ಳಿಯನ್ನು ಹಾಕಿ. ಕೆಂಪಗಾದ ಬಳಿಕ ತರಕಾರಿಗಳನ್ನು ಹಾಕಿ.

  • ನಂತರ ರುಚಿಗೆ ತಕ್ಕಷ್ಟು ಉಪ್ಪು, ಅಚ್ಚಖಾರದ ಪುಡಿ, ಬಿರಿಯಾನಿ ಮಾಸಾಲಾ ಪುಡಿ, ಮೊಸರು. ಅರಿಶಿಣದ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮಸಾಲೆ ಕುದಿಯುತ್ತಿದ್ದಂತೆಯೇ ಅಕ್ಕಿ ಹಾಗೂ ಅಳತೆಗೆ ತಕ್ಕಷ್ಟು ನೀರು ಹಾಕಿ 1-2 ಕೂಗು ಕೂಗಿಸಿಕೊಂಡರೆ ರುಚಿಕರವಾದ ವೆಜ್ ಬಿರಿಯಾನಿ ಸವಿಯಲು ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC ಪಾಸಾದವರಿಗೆ ಗುಡ್ ನ್ಯೂಸ್: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ..!545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ಬೈ ಎಲೆಕ್ಷನ್, ಸಿಪಿ ಯೋಗೇಶ್ವರ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ.! ಡಿ.ಕೆ.ಶಿಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ: ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ.!MLC ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆಗಡಿಯಲ್ಲಿ ಗಸ್ತು ತಿರುಗಲು ಭಾರತ, ಚೀನಾ ಗ್ರೀನ್ ಸಿಗ್ನಲ್ಪೊಲೀಸರ ತ್ಯಾಗ ಹಾಗೂ ಬಲಿದಾನ ಸ್ಮರಣೀಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್