LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಮುಗಿದಿದೆ - ಕಮಿಷನರ್ ದಯಾನಂದ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ ತನಿಖೆ ಪೂರ್ಣಗೊಂಡಿದೆ. 17ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳು ಕಲೆ ಹಾಕಿದ್ದು ಅಂತಿಮ ವರದಿ ರೆಡಿಯಾಗಿದೆ. 3991ಪುಟಗಳನ್ನ ಚಾರ್ಜ್ ಶೀಟ್‌ನ ಸಲ್ಲಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕೆಲವರನ್ನ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಎಫ್‌ಎಸ್‌ಎಲ್ ಮತ್ತು ಸಿಎಫ್‌ಎಸ್‌ಎಲ್‌ನಿಂದ ವರದಿ ಬಂದಿದೆ. ಸಿಎಫ್‌ಎಸ್‌ಎಲ್‌ನಿಂದ ಒಂದಷ್ಟು ವರದಿ ಬಾಕಿ ಇದೆ. ಸರ್ಕಾರಿ ಅಧಿಕಾರಿಗಳನ್ನು ಈ ಕೇಸ್‌ನಲ್ಲಿ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲಾಗಿದೆ 231ಸಾಕ್ಷಿದಾರರನ್ನ ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ ಎಫ್‌ಎಸ್‌ಎಲ್‌ನಿಂದ ಎಲ್ಲಾ ವರದಿ ಬಂದಿವೆ. ಸಿಎಫ್ ಎಸ್ ಎಲ್ ಹೈದ್ರಾಬಾದ್ ನಿಂದ ಎಲೆಕ್ಟ್ರಾನಿಕ್ ಡಿವೈಸ್‌ಗಳ ವರದಿ ಬಂದಿದೆ. ಇನ್ನೂ ಒಂದಷ್ಟು ವರದಿ ಬರಬೇಕಿದೆ. ಸಾಕಷ್ಟು ತಾಂತ್ರಿಕ ಸಾಕ್ಷಿಗಳು ದೊರೆತಿವೆ. ತನಿಖೆಯಲ್ಲಿ ಎಲ್ಲವನ್ನೂ ಅಳವಡಿಸಲಾಗಿದೆ. ಇದು ಉತ್ತಮವಾದ ತನಿಖೆ. ಎಲ್ಲಾ ರೀತಿಯಾದ ತನಿಖೆ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!