ರೈತರಿಗೆ ಮುಖ್ಯ ಮಾಹಿತಿ.! ಎಪಿಎಂಸಿ: ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಕಡ್ಡಾಯ
ಚಿತ್ರದುರ್ಗ: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.
ಗೇಟ್ ಎಂಟ್ರಿ ಮಾಡಿಸುವಾಗ ಕಡ್ಡಾಯವಾಗಿ ಅಧಿಕೃತ ರೈತರ ಹೆಸರು, ಹುಟ್ಟುವಳಿಯ ಅಂದಾಜು ಪ್ರಮಾಣ, ರೈತರ ಮೊಬೈಲ್ ಸಂಖ್ಯೆ, ವಿಳಾಸವನ್ನು ಹಾಗೂ ಯಾವ ಅಂಗಡಿಗೆ ಹುಟ್ಟುವಳಿಯನ್ನು ಮಾರಾಟಕ್ಕೆ ಬಿಡಲಾಗಿದೆ ಎಂದು ಕಡ್ಡಾಯವಾಗಿ ತಿಳಿಸಬೇಕು. ಟೆಂಡರ್ ಘೋಷಣೆಯಾದ ನಂತರ ಹುಟ್ಟುವಳಿಯ ನಿಗಧಿತ ತೂಕದ ಪಟ್ಟಿ ಪಡೆಯಲು ಹಾಗೂ ಬಿಳಿ ಚೀಟಿಯನ್ನು ತಿರಸ್ಕರಿಸಿ, ಅಧಿಕೃತ ಲೆಕ್ಕ ತೀರುವಳಿಯ ಪಟ್ಟಿ ಪಡೆಯತಕ್ಕದ್ದು.
ಒಂದು ವೇಳೆ ರೈತರು ಅಧಿಕೃತ ವಿವರಗಳನ್ನು ನಮೂದಿಸದೇ ಇದ್ದಲ್ಲಿ, ಯಾವುದಾದರೂ ದೂರುಗಳು ಬಂದಾಗ ಬಗೆಹರಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ರೈತರು ತಮ್ಮ ಅಧೀಕೃತ ವಿವರಗಳನ್ನು ನಮೂದಿಸಲು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.