LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಮುಖ್ಯ ಮಾಹಿತಿ: ಬೆಳೆಹಾನಿ ರೈತರ ಪಟ್ಟಿ ಪ್ರಕಟ : ಆಕ್ಷೇಪಣೆಗಳಿಗೆ ಆಹ್ವಾನ

 

ಚಿತ್ರದುರ್ಗ: ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ, 35 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 197.50 ಹೆಕ್ಟೇರ್ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 100.71 ಹೆಕ್ಟೇರ್ ಕೃಷಿ ಬೆಳೆ ಹಾಗೂ 22.90 ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ 123.61 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ.  ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು.

ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!