LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗವಕಾಶ- 2 ಲಕ್ಷದವರೆಗೆ ಸಂಬಳ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. IRCTC ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಸದ್ಯ ನೇಮಕಾತಿ ವಯಸ್ಸಿನ ಮಿತಿ ಗರಿಷ್ಠ 55 ವರ್ಷ. ನವೆಂಬರ್ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಸೂಕ್ತರನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್‌ಸೈಟ್‌ನಲ್ಲಿ ಉದ್ಯೋಗ ನೇಮಕಾತಿ ಮಾಹಿತಿ ನೀಡಲಾಗಿದೆ. ಇಷ್ಟೇ ಅಲ್ಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿನಂತಿಸಲಾಗಿದೆ.



ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮಡಿವಾಳ ಮಾಚಿದೇವ .!ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಉಚಿತ ಚಿಕಿತ್ಸಾ ಸೌಲಭ್ಯ - ಇಂದಿನಿಂದ ಜಾರಿಒಂದೇ ಸಲಕ್ಕೆ ಪಾಕ್‌ಗೆ 28,000 ಕ್ಯುಸೆಕ್ ನೀರು ಬಿಡುಗಡೆ- ಪ್ರವಾಹ ಭೀತಿಮಂಗಳೂರು:  ಮೀನು ವ್ಯಾಪಾರಿಯ ಹತ್ಯೆ ಯತ್ನ ಪ್ರಕರಣದಲ್ಲಿ ಕೋಡಿಕೆರೆ ಲೋಕು ಅರೆಸ್ಟ್..!ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್..!ಅಕ್ರಮ ಗಣಿಗಾರಿಕೆ ಕೇಸ್: ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು-7 ವರ್ಷ ಜೈಲುಭದ್ರತಾ ಪಡೆಗಳ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶಕ್ಕೆಮಂಗಳೂರು ಹೈ ಅಲರ್ಟ್: ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗಯುದ್ಧದ ಭೀತಿಯಿಂದ ಪಾಕಿಸ್ತಾನ ಸೇನೆಯಲ್ಲಿ ಹೆಚ್ಚಿದ ಬಂಡಾಯ :ಪಾಕ್ ಸೇನೆಗೆ 800 ಬಲೂಚ್ ಸೈನಿಕರು ಸಾಮೂಹಿಕ ರಾಜೀನಾಮೆ