LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡು ದುರಂತದಿಂದ ದಾಖಲೆ ಕಳೆದುಕೊಂಡವರಿಗೆ ವಿಶೇಷ ಅದಾಲತ್ ಯೋಜನೆ

ವಯನಾಡು: ನೆನೆದಷ್ಟು ಭಯಭೀತಗೊಳಿಸುವ ವಯನಾಡು ದುರಂತ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಈ ದುರಂತದಿಂದಾಗಿ ಅದೆಷ್ಟೋ ಜನ ಕುಟುಂಬ, ಮನೆ ಸರ್ವಸ್ವವನ್ನೂ ಕಳೆದುಕೊಂಡು ಬೀದಿಗೆ ಬಂದು ನಿಂತಿದ್ದಾರೆ. ತಮ್ಮ ಆಸ್ತಿಪಾಸ್ತಿ ಕಳೆದುಕೊಂಡು ದಾಖಲೆಗಳು ಕೂಡಾ ನಷ್ಟವಾಗಿದೆ. ಅಂತಹವರಿಗಾಗಿ ಇದೀಗ ಹೈಕೋರ್ಟ್ ಹೊಸ ನಿಯಮ ಜಾರಿಗೆ ತರಲಿದೆ.

ಭೂಕುಸಿತಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಹೈಕೋರ್ಟ್ ಇಂದು ಪರಿಗಣಿಸಲಿದೆ. ನ್ಯಾಯಮೂರ್ತಿ ಜಯಶಂಕರನ್ ನಂಬಿಯಾರ್, ನ್ಯಾಯಮೂರ್ತಿ ವಿಎಂ ಶ್ಯಾಮ್ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಂತ್ರಸ್ತರಿಗೆ, ಅವರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಅನೇಕ ಬೇಡಿಕೆಗಳ ಅರ್ಜಿಯನ್ನು ನ್ಯಾಯಾಲಯ ಇಂದು ಪರಿಗಣಿಸಲಿದೆ.

ಚುರಲ್‌ಮುಲಾ ಮುಂಡಕೈ ಸಾಮ್ಲಿಮಟ್ಟಂನಲ್ಲಿನ ಭೂಕುಸಿತ ಪರಿಣಾಮವಾಗಿ ಸಾವುನೋವುಗಳ ಸಂಖ್ಯೆ ಹೇರಳವಾಗಿದ್ದು, ಸಂತ್ರಸ್ತರ ಅವಲಂಬಿತರಿಗೆ ವಿಳಂಬವಿಲ್ಲದೆ ಅವರ ಸವಲತ್ತುಗಳು ಸಿಗುವಂತೆ ಮಾಡಲು ಹಲವಾರು ವಿಧಾನಗಳನ್ನು ಸಡಿಲಗೊಳಿಸಲಾಗುವುದು. ಎಕ್ಸ್‌ಗ್ರೇಷಿಯಾ ಸೇರಿದಂತೆ ಎಲ್ಲಾ ಪ್ರಯೋಜನಗಳನ್ನು ಪಡೆಯಲು ಇದು ಸಹಕಾರಿಯಾಗಿದೆ. ಕೋವಿಡ್ ಪರಿಹಾರ ಮಾದರಿಯಲ್ಲಿಯೇ ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 19 ರ ಅಡಿಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಸರ್ಕಾರವು ಸಂಬಂಧಿಕರನ್ನು ವಾರಸುದಾರರನ್ನಾಗಿ ಪರಿಗಣಿಸಲು ಆದೇಶ ಹೊರಡಿಸಲಾಗಿದೆ.

ಭೂಕುಸಿತದಲ್ಲಿ ಮೃತರ ಕುಟುಂಬ ಸದಸ್ಯರು ಇಲ್ಲದಿದ್ದರೆ, ಮುಂದಿನ ಸಂಬಂಧಿಕರು ಸಹ ಆರ್ಥಿಕ ನೆರವು ಪಡೆಯುತ್ತಾರೆ. ಇದಕ್ಕಾಗಿ ಉತ್ತರಾಧಿಕಾರ ಹಕ್ಕು ಪ್ರಮಾಣಪತ್ರವನ್ನು ಹಾಜರುಪಡಿಸಬೇಕು. ನಾಪತ್ತೆಯಾದವರ ಅವಲಂಬಿತರಿಗೂ ಆರ್ಥಿಕ ನೆರವು ಸಿಗಲಿದೆ ಎಂದು ಹೇಳಲಾಗಿದೆ. ಅಂಗವೈಕಲ್ಯದಿಂದ ಬಳಲುತ್ತಿರುವವರಿಗೆ ಸಿಎಂಡಿಆರ್‌ಎಫ್‌ನಿಂದ 50,000 ನೀಡಲು ನಿರ್ಧರಿಸಲಾಗಿದೆ. ಪರಿಹಾರ ಶಿಬಿರಗಳಲ್ಲಿ ವಾಸಿಸುವ ಕುಟುಂಬಕ್ಕೆ ತಿಂಗಳಿಗೆ 6000 ರೂ ಬಾಡಿಗೆ ನೀಡಲಾಗುವುದು ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಪಿ ಸಂಜಯ್‌ಗೆ ಮರಣದಂಡನೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್​ಗೆ ಮನವಿಸೈಬರ್ ವಂಚಕರ ಬಲೆಗೆ ಬಿದ್ದ ನಿವೃತ್ತ ನ್ಯಾಯಮೂರ್ತಿ: 90 ಲಕ್ಷ ರೂ. ಟೊಪ್ಪಿ ಹಾಕಿಸಿಕೊಂಡ ಜಡ್ಜ್‌ಕೊಲೆ ಕೇಸ್‌ನ ಆರೋಪಿ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು - ಆರ್‌ಆರ್ ನಗರ ಠಾಣೆಯಲ್ಲಿ ಗನ್ ಜಮೆ ಮಾಡಲು ಸೂಚನೆಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 12 ನಕ್ಸಲರ ಹತ್ಯೆ'ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ'- ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್‌ ‘ಮಹಾತ್ಮ ಗಾಂಧೀಜಿ’ ಪುತ್ಥಳಿ ಅನಾವರಣಮೂಡ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ- ಸಂಸದ ಯದುವೀರ್76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇಂಡೋನೇಷ್ಯಾ ಸೇನಾ ತಂಡ ಭಾಗಿIPL 2025: ಅಭ್ಯಾಸ ಆರಂಭಿಸಿದ ಮಹೇಂದ್ರ ಸಿಂಗ್ ಧೋನಿಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಸೂಚನೆ