LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು..!

ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವಾಗಲೇ ದಿಢೀರ್ ಎದೆ ಹಿಡಿದುಕೊಂಡು ಕುಸಿದುಬಿದ್ದ ಶಿಕ್ಷಕ ಹೃದಯಸ್ತಂಭನದಿಂದ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಸುಂದಪುರ್ ಜಿಲ್ಲೆಯ ಪಂಚಾಯತ್ ಯೂನಿಯನ್ ಮಾಧ್ಯಮಿಕ ಶಾಲೆಯಲ್ಲಿ ನಡೆದಿದೆ.

49 ವರ್ಷದ ಆಂಟೋನಿ ಗೆರಾಲ್ಡ್ ಸಾವನ್ನಪ್ಪಿದ ಶಿಕ್ಷಕ. ಬೂದಪಡ್ಡಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕ ಬುಧವಾರ ಎಂದಿನಿಂದ ಶಾಲೆಗೆ ಆಗಮಿಸಿ, ಪಾಠ-ಪ್ರವಚನದಲ್ಲಿ ಮಗ್ನರಾಗಿದ್ದರು. ನಾಲ್ಕನೇ ತರಗತಿ ಮಕ್ಕಳಿಗೆ ಪಾಠ ಮಾಡುವಾಗ ದಿಢೀರ್ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣಕ್ಕೆ ಕುಸಿದುಬಿದ್ದ ಅವರು ಸಾವನ್ನಪ್ಪಿದ್ದಾರೆ.

ಶಿಕ್ಷಕರು ಎದೆ ಹಿಡಿದುಕೊಂಡು ಕುಸಿದಿದ್ದರಿಂದ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ತಕ್ಷಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ಬಳಿಕ ಅವರು ಹೃದಯಸ್ತಂಭನದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಗುರುವಾರ ಮೃತ ಶಿಕ್ಷಕನಿಗೆ ಶಾಲಾ ಸಿಬ್ಬಂದಿ ಮತ್ತು ಪೋಷಕರು ಅಂತಿಮ ಗೌರವ ನಮನ ಸಲ್ಲಿಸಿದರು. ಕಳೆದ ಏಳು ವರ್ಷದಿಂದ ಆಂಟೋನಿ ಈ ಶಾಲೆಯಲ್ಲಿ ಶಿಕ್ಷಕ ವೃತ್ತಿ ನಿಭಾಯಿಸುತ್ತಿದ್ದು, ಮಕ್ಕಳ ಜ್ಞಾನಾಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಶಾಲೆ ಸ್ಮರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!