LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನದಲ್ಲಿ ತಾಂತ್ರಿಕ ದೋಷ - ಶೃಂಗಸಭೆ ಮುಗಿದರೂ ಭಾರತದಲ್ಲೇ ಉಳಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ

ನವದೆಹಲಿ : ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಯಶಸ್ವಿಯಾಗಿದೆ. 2 ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ಹಲವು ಮಹತ್ತರ ಹೆಜ್ಜೆಗಳನ್ನು ಇಟ್ಟರು. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಶೃಂಗಸಭೆ ಯಶಸ್ವಿಯಾಗಿದೆ. ಇನ್ನು, ಶೃಂಗಸಭೆ ಮುಗಿಯುತ್ತಿದ್ದಂತೆ ನಿನ್ನೆಯೇ ಎಲ್ಲ ಜಿ20 ದೇಶಗಳ ಪ್ರತಿನಿಧಿಗಳು ವಾಪಸ್ ತಮ್ಮ ತಮ್ಮ ದೇಶಗಳಿಗೆ ತೆರಳಿದರು. ಆದರೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮಾತ್ರ ತಮ್ಮ ನಿಯೋಗದೊಂದಿಗೆ ದೆಹಲಿಯಲ್ಲೇ ವಾಸ ಮಾಡುವಂತಾಯಿತು. 2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ. ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಕಾರಣದಿಂದ ನಿನ್ನೆ ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಂಡಿದ್ದಾರೆ. ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಪ್ರಯಾಣಿಸಬೇಕಿದ್ದ CFC001 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆ ಹೇಳಿದೆ. ವಿಮಾನದಲ್ಲಿನ ದೋಷವನ್ನು ರಾತ್ರಿಯೇ ಸರಿಪಡಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಇರುತ್ತದೆ ಎಂದು ಕೆನಡಾ ಪ್ರಧಾನ ಮಂತ್ರಿ ಕಚೇರಿಗೆ ಮಾಹಿತಿ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್