LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಹೊಸಪೇಟೆ: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿ ವಿಜಯನಗರ ಜಿಲ್ಲೆಯಲ್ಲಿ ಮಂಜೂರು ಮಾಡಲಾಗಿರುವ ಮತ್ತು ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವಿರ: ಎನ್.ಟಿ.ಇ.ಪಿ ಮೆಡಿಕಲ್ ಆಫೀಸರ್, ಸಿನಿಯರ್ ಡಿ.ಆರ್.ಟಿ.ಬಿ ಟಿಬಿ-ಹೆಚ್.ಐ.ವಿ ಸೂಪರ್‌ವೈಜರ್, ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಜಿಲ್ಲಾ ಪಿಪಿಎಂ ಸಂಯೋಜಕ, ಡಿಆರ್-ಟಿಬಿ ಸ್ಟಾö್ಯಟಿಸ್ಟಿಕಲ್ ಅಸಿಸ್ಟಂಟ್, ಅಕೌಂಟಂಟ್, ಡಿ.ಆರ್.ಟಿ.ಬಿ ಕೌನ್ಸಲರ್, ಎಸ್.ಟಿ.ಎಲ್.ಎಸ್,  ಈ ಎಲ್ಲಾ ಹುದ್ದೆಗಳಲ್ಲಿ ತಲಾ ಒಂದು ಹುದ್ದೆಗಳು ಖಾಲಿ ಇದ್ದು, ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಯು ವಿಜಯನಗರ ವೆಬ್‌ಸೈಟ್  https://vijayanagara.nic.in/ ನಲ್ಲಿ ಲಭ್ಯವಿರುತ್ತದೆ.

ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚುಗೊಳಿಸುವುದು ಅಥವಾ ಕಡಿಮೆಗೊಳಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನಿರ್ಧಾರದಂತಿರುತ್ತದೆ. ಆಯ್ಕೆಯ ಪ್ರಕ್ರಿಯೆ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿ ತಿರ್ಮಾನವೇ ಅಂತಿಮವಾಗಿರುತ್ತದೆ. ಕೋವಿಡ್-19ರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. 6 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇಕಡ 2, 6 ತಿಂಗಳು 1 ದಿನದಿಂದ 12 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇಕಡ 4, 12 ತಿಂಗಳು 1 ದಿನದಿಂದ 18 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇಕಡ 6, 18 ತಿಂಗಳು 1 ದಿನದಿಂದ 24 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇಕಡ 8 ಕೃಪಾಂಕವನ್ನು ನೀಡಲಾಗುವುದು. ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೇರಿಟ್ ಲಿಸ್ಟ್ನ್ನು ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 01 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಕಛೇರಿಯ ಸಮಯದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಾರ್ಯಾಲಯ, 60 ಹಾಸಿಗೆ ಎಂ.ಸಿ.ಹೆಚ್. ಆಸ್ಪತ್ರೆ ಪಕ್ಕದಲ್ಲಿ ದೊಡ್ಡಮಸೀದಿ ಹತ್ತಿರ ಹೊಸಪೇಟೆ, ಇಲ್ಲಿಂದ ಅರ್ಜಿಯನ್ನು ಪಡೆದು ನಿಗದಿತ ಅವಧಿಯ ಸಂಜೆ 05:30 ರ ಒಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ವೇಳೆ ಸ್ವಯಂ ದೃಢೀಕರಿಸಿದ ಎಲ್ಲಾ ದಾಖಲಾತಿಗಳ ಪ್ರತಿಗಳನ್ನು ಅರ್ಜಿಗಳೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಜಗದೀಶ ಪಾಟ್ನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾಲು ಮಾರಾಟದಲ್ಲಿ ಹೊಸ ದಾಖಲೆ ಬರೆದ ಕೆಎಂಎಫ್‌: ಒಂದೇ ದಿನ 51 ಲಕ್ಷ ಲೀಟರ್ ಮಾರಾಟ!ನಾಳೆ ಶೂನ್ಯ ನೆರಳಿನ ದಿನ.! ಚಿತ್ರದುರ್ಗದಲ್ಲೂ ನೋಡಬಹುದು.!ತುಟಿ ಕಪ್ಪಾಗಿದೆಯಾ..? ಚಿಂತೆ ಬಿಡಿ ಇಲ್ಲಿದೆ ಮನೆ ಮದ್ದುರುಚಿಕರವಾದ ಮೊಸರು ಅವಲಕ್ಕಿ ಮಾಡುವ ವಿಧಾನಅತಿಯಾದ ಕಾಫಿ ಸೇವನೆಯಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳುಈ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ,.!ಚಿತ್ರದುರ್ಗ ಲೋಕಸಭಾ ಚುನಾವಣೆ: ಸಂಜೆ 5 ರ ವೇಳೆಗೆ ಅಂದಾಜು ಶೇ.67ರಷ್ಟು ಮತದಾನ ಎಲ್ಲೆಲ್ಲಿ ಎಂಬ ಮಾಹಿತಿ.!ಏಪ್ರಿಲ್ 28 ನಾಳೆ  ದಾವಣಗೆರೆಗೆ ಪ್ರಧಾನ ಮಂತ್ರಿಗಳ ಪ್ರವಾಸ, ಸಂಚಾರಿ ಮಾರ್ಗಗಳಲ್ಲಿ ಭಾರಿ ಬದಲಾವಣೆಯ ಡಿಟೈಲ್ ಇಲ್ಲಿದೆ.!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ-ಗುಪ್ತ ಮಂಚಣ್ಣ ಅವರ ವಚನ