LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅವರು ಹೇಳಿದರು.

ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿರುವ ಬಗ್ಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ದೂರು ಕೊಟ್ಟರೆ ಸರ್ಕಾರ ಅವರ ರಕ್ಷಣೆಗೆ ಬರುತ್ತೆ ಎಂದರು.

ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದು ಕಿಡಿ ಕಾರಿದರು.

ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ ಇಂತಹ ಪದ ಬಳಸುವುದಿಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಜಪ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!