LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ' - ಎಲಾನ್ ಮಸ್ಕ್‌

ನ್ಯೂಯಾರ್ಕ್: ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಮತ್ತು ಟ್ವಿಟ್ಟರ್ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿರುವ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ