ಶೀಘ್ರದಲ್ಲೇ ಬಿಜೆಪಿಗರ ಹಗರಣ ಬಯಲಿಗೆ: ಸಿದ್ದರಾಮಯ್ಯ.!
ಬೆಂಗಳೂರು: ಬಿಜೆಪಿಗರ ಹಗರಣವನ್ನು ಶೀಘ್ರದಲ್ಲೇ ಬಯಲು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ – ಜೆಡಿಎಸ್ ನಾಯಕರಿಗೆ ಇಲ್ಲ. ಅವರದೇ ಹಗರಣಗಳ ರಾಶಿ ಬಿದ್ದಿದೆ, ಅವೆಲ್ಲವನ್ನೂ ಆದಷ್ಟು ಶೀಘ್ರದಲ್ಲಿ ಹೊರತಂದು ಅವರ ಬಂಡವಾಳ ಬಯಲು ಮಾಡುತ್ತೇವೆ ಎಂದು ಹೇಳಿದ್ದಾರೆ.
ಹಗರಣವೇ ಅಲ್ಲದ ಮುಡಾ ವಿಚಾರವನ್ನು ಬಿಜೆಪಿ – ಜೆಡಿಎಸ್ ನಾಯಕರು ದೊಡ್ಡ ಹಗರಣವೆಂಬಂತೆ ಬಿಂಬಿಸಿ, ಆ ಮೂಲಕ ನಮ್ಮ ಸರ್ಕಾರವನ್ನು ಹೇಗೆ ಅಸ್ಥಿರಗೊಳಿಸಲು ಹೊಂಚು ಹಾಕಿದ್ದಾರೆ ಎಂಬುದನ್ನು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರಾದ ವಿ.ಎಸ್. ಉಗ್ರಪ್ಪ ಅವರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನೀವೊಮ್ಮೆ ಅವರ ಮಾತುಗಳನ್ನು ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.