LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆಯ ಅಗತ್ಯವಿಲ್ಲ'-ಡಿ.ಕೆ. ಶಿವಕುಮಾರ್

ಬೆಂಗಳೂರು:“ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು“ಬಿಜೆಪಿ ಏನಾದರೂ ಕುತಂತ್ರ ಮಾಡಲಿ. ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದೇನೆ. ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಸುಧಾಕರ್ ಅವರು ಅನುಮತಿ ಮೇರೆಗೆ ಖಾಸಗಿ ಜಮೀನು ಖರೀದಿ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಬೇರೆಯವರು ಕಾಂಪೌಂಡ್ ಹಾಕಿದ್ದಾರೆ. ಹೀಗಾಗಿ ಇವರ ಕಡೆಯವರು ಜಾಗ ಭದ್ರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವಿಚಾರವಾಗಿ ಪರಿಶಿಷ್ಟ ಜಾತಿಯವರು ದೂರು ನೀಡಿದ್ದು, ಪಿಸಿಆರ್ ಪ್ರಕಾರ ದೂರು ದಾಖಲಿಸಲಾಗಿದೆ.

ಈ ದೂರು ನೀಡುವ ಸಂದರ್ಭದಲ್ಲಿ ಸುಧಾಕರ್ ಅವರು ಚಿತ್ರದುರ್ಗದಲ್ಲಿ ಇದ್ದರು. ಹೀಗಾಗಿ ಇದು ಸುಳ್ಳು ಕೇಸು ಎಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನಮ್ಮ ಬಳಿ ಇದೆ. ನಾಳೆ ಬೆಳಗ್ಗೆ ನನ್ನ ಮೇಲೂ ಸುಳ್ಳು ದೂರು ನೀಡಬಹುದು. ಬಿಜೆಪಿಯವರು ಸುಧಾಕರ್ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಕನಸು ಕಾಣುವ ಅಗತ್ಯವಿಲ್ಲ. ಯಾರಾದರೂ ತಪ್ಪು ಮಾಡಿದ್ದರೆ, ಕಾನೂನು ಮುಂದೆ ಯಾರೂ ದೊಡ್ಡವರಿಲ್ಲ. ಕಾನೂನಿಗೆ ಎಲ್ಲರೂ ಗೌರವ ನೀಡಬೇಕು.”

ಒಂದು ನಿಮಿಷದ ವಿಡಿಯೋ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಧಮಕಿ ಪ್ರಕರಣಕ್ಕೂ ಪಿಸಿಆರ್ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ” ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!