LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಕಾರಿ ನೌಕರರಿಗೆ ಗುಡ್ ನ್ಯೂಸ್ ಏಳನೇ ವೇತನ ಆಗಸ್ಟ್ 1ರಿಂದ ಸಿಗಲಿದೆ.!

 

ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಪರಿಷ್ಕೃತ ವೇತನ ಶ್ರೇಣಿ ಆಗಸ್ಟ್ 1ರಿಂದ ನೌಕರರಿಗೆ ಸಿಗಲಿದೆ.

ಪರಿಷ್ಕೃತ ವೇತನ ಶ್ರೇಣಿ ಜಾರಿ ಮಾಡದೇ ಇದ್ದರೆ ಇದೇ ತಿಂಗಳ 29ರ ಬಳಿಕ ಕೆಲಸ ಸ್ಥಗಿತದ ಮುಷ್ಕರ ನಡೆಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಸಿತ್ತು. ಅಲ್ಲದೇ, ಎರಡು ಹಂತಗಳಲ್ಲಿ ಪ್ರತಿಭಟನೆಯನ್ನೂ ನಡೆಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ, ಸೋಮವಾರ ನಡೆದ ಸಚಿವ ಸಂಪುಟ ಸಭೆ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿದೆ.

ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ  ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೈಗೊಂಡಿತ್ತು. ಬಾಕಿ ಉಳಿದಿರುವ ಶೇ 10.50ರಷ್ಟು ನೀಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು