Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾರ್ವಜನಿಕರ ಮನೆ ಬಾಗಿಲಿಗೆ ಬರಲಿದೆ ಸರ್ಕಾರ : ನಾಳೆಯಿಂದ ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಆರಂಭ

ಬೆಂಗಳೂರು : ಸೆಪ್ಟೆಂಬರ್‌ 5ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ "ಪ್ರಜಾಸೇವೆ" ಅಭಿಯಾನ ಆರಂಭವಾಗಲಿದ್ದು, ಪ್ರತಿ ಶನಿವಾರ ತಾಲೂಕು/ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯಲಿದ್ದು ಸ್ಥಳದಲ್ಲೇ ಅರ್ಜಿ ಹಾಗೂ ದೂರುಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಗ್ರಾಮ ಒನ್‌ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಶನಿವಾರ ಜನಸ್ಪಂದನ ಸಭೆಗಳು

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆಯವರೆಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ:

1ನೇ ಮತ್ತು 3ನೇ ಶನಿವಾರ: ತಾಲೂಕು ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

2ನೇ ಮತ್ತು 4ನೇ ಶನಿವಾರ: ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆಗಳು ಜರುಗಲಿವೆ.

ಗ್ರಾಮ ಒನ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಮತ್ತು ಅಹವಾಲುಗಳನ್ನು ದಾಖಲಿಸಲು ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ:

ಸಾರ್ವಜನಿಕರು ಹತ್ತಿರದ ಗ್ರಾಮ ಒನ್ (Grama One) ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಪ್ರಜಾಸೇವೆ ಸಭೆಗಳು ನಡೆಯುವ ಸ್ಥಳದಲ್ಲೇ ತಾತ್ಕಾಲಿಕ ಗ್ರಾಮ ಒನ್ ಮಳಿಗೆಗಳನ್ನು ಸ್ಥಾಪಿಸಿ, ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಇದರಿಂದ ಸಾರ್ವಜನಿಕರು ಸ್ಥಳದಲ್ಲೇ ಆನ್‌ಲೈನ್ ಮೂಲಕ ದೂರು ದಾಖಲಿಸಲು ಸಾಧ್ಯವಾಗಲಿದೆ.

ಸಹಾಯವಾಣಿ: 1902

ವೆಬ್‌ಸೈಟ್: ipgrs.karnataka.gov.in

ಯಾವೆಲ್ಲಾ ಸಮಸ್ಯೆಗಳಿಗೆ ಅರ್ಜಿ ಸಲ್ಲಿಸಬಹುದು?

ಸಾರ್ವಜನಿಕರು ದಿನನಿತ್ಯ ಎದುರಿಸುವ ಹಲವು ಮೂಲಭೂತ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದು:

ಕಂದಾಯ ಮತ್ತು ಮೂಲಸೌಕರ್ಯ: ಪಿಂಚಣಿ, ಪಹಣಿ (RTC), ವಸತಿ ಯೋಜನೆಗಳು, ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್), ಸಾರಿಗೆ ಮತ್ತು ರಸ್ತೆ ಅಭಿವೃದ್ಧಿ.

ನಾಗರಿಕ ಸೌಲಭ್ಯಗಳು: ಕುಡಿಯುವ ನೀರಿನ ಸಮಸ್ಯೆ, ದೇವಸ್ಥಾನಗಳ ಜೀರ್ಣೋದ್ಧಾರ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳ ಅಭಿವೃದ್ಧಿ.

ಯೋಜನೆಗಳು ಮತ್ತು ಸೇವೆಗಳು: ಕೆರೆ ತುಂಬಿಸುವ ಯೋಜನೆಗಳು, ಖಾಸಗಿ ಉದ್ಯೋಗಾವಕಾಶ, ಪೊಲೀಸ್ ಸೇವೆ, ಡಿಜಿ ರಾಮ್‌ಜಿ.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ಇತರ ಯಾವುದೇ ಸಮಸ್ಯೆಗಳ ಕುರಿತು ನೇರವಾಗಿ ದೂರು ನೀಡಬಹುದು.

ತ್ವರಿತ ಅರ್ಜಿ ವಿಲೇವಾರಿಗೆ 3 ಹಂತಗಳ ಕಟ್ಟುನಿಟ್ಟಿನ ಕ್ರಮ

ದಾಖಲಾದ ಅರ್ಜಿಗಳು ಕಡತದಲ್ಲೇ ಉಳಿಯದಂತೆ ಶೀಘ್ರ ವಿಲೇವಾರಿಗೆ ಸರ್ಕಾರ ಕಟ್ಟುನಿಟ್ಟಿನ ವ್ಯವಸ್ಥೆ ರೂಪಿಸಿದೆ:

ಪ್ರತಿ ಬುಧವಾರ 3 ಹಂತಗಳ ಪರಿಶೀಲನೆ: ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಪ್ರತಿ ಬುಧವಾರ ತಾಲೂಕು, ಉಪವಿಭಾಗ ಹಾಗೂ ಜಿಲ್ಲಾ ಮಟ್ಟದಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಭೇಟಿ: ಅರ್ಜಿಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸಲು ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗೆ ಭೇಟಿ ನೀಡಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಪರಿಹಾರಕ್ಕೆ ಸೂಚನೆ ನೀಡಲಿದ್ದಾರೆ.

ಮುಖ್ಯಮಂತ್ರಿಗಳಿಂದ ಮಾಸಿಕ ಪರಿಶೀಲನೆ: ಇಡೀ ಅಭಿಯಾನದ ಪ್ರಗತಿ ಮತ್ತು ಸಾರ್ವಜನಿಕರ ದೂರುಗಳ ಪರಿಹಾರದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ರಾಜ್ಯ ಮಟ್ಟದ ಉನ್ನತ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ತಮ್ಮ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋರಿದೆ.

https://twitter.com/KarnatakaVarthe/status/2095106238128251266?s=20

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ: ಸಚಿವ ಕೃಷ್ಣ ಬೈರೇಗೌಡಕೆ.ಆರ್.ಐ.ಡಿ.ಎಲ್. ಆರೋಪ- ವರದಿ ಬಳಿಕ ಕ್ರಮ: ಸಚಿವ ಈಶ್ವರ ಖಂಡ್ರೆಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ: ಸಚಿವ ಈಶ್ವರ ಖಂಡ್ರೆಸಾಗರ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ದಾಳಿUPI ಪಾವತಿ ವೇಳೆ ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ? ವಾಪಸ್ ಪಡೆಯಲು ಹೀಗೆ ಮಾಡಿ!ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಧ್ಯಾಹ್ನ ‘ಶಿಕ್ಷಕರ ದಿನಾಚರಣೆ’ ಆಚರಿಸಲು ಸರ್ಕಾರ ಆದೇಶBIG NEWS : ನೌಕರರ ಗ್ರಾಚ್ಯುಟಿ ಹಣದಿಂದ ಬಾಕಿ ಮೊತ್ತ ಕಡಿತಗೊಳಿಸುವಂತಿಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶಗಮನಿಸಿ : ಪ್ರತಿಯೊಬ್ಬ ಭಾರತೀಯನ ಮೊಬೈಲ್’ನಲ್ಲೂ ಇರಬೇಕಾದ 5 ಸರ್ಕಾರಿ ಆ್ಯಪ್‌ಗಳಿವು.!ಬೆಂಗಳೂರಿಗರೇ ಗಮನಿಸಿ : 4 ಫ್ಲೈ ಓವರ್ ಗಳಲ್ಲಿ ಇಂದಿನಿಂದ ಈ ವಾಹನಗಳ ಸಂಚಾರ ಸಂಪೂರ್ಣ ನಿಷೇಧ.!ಬೆಂಗಳೂರಿನಲ್ಲಿ 'ಏರೋ ಇಂಡಿಯಾ 2027' ದಿನಾಂಕ ಪ್ರಕಟ: ಫೆಬ್ರವರಿ 8 ರಿಂದ 12 ರವರೆಗೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ!