LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿ

ಹೈದರಾಬಾದ್: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 7 ತಿಂಗಳಾದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್‌ ನಿಷೇಧ ವಾಪಸ್‌ಗೆ ಕರ್ನಾಟಕ ಸರ್ಕಾರ ಏಳು ತಿಂಗಳು ಏಕೆ ತೆಗೆದುಕೊಂಡಿದೆ? ಸಿಎಂ ಸಿದ್ದರಾಮಯ್ಯ ಅವರು, ನಿಮಗೆ ಬೇಕಾದ್ದನ್ನು ಅವರು ಧರಿಸಬಹುದು ಅಂತಾ ಹೇಳಿದ್ರು. ಇದಾದ ಕೆಲವೇ ಗಂಟೆಗಳಲ್ಲಿ ನಾವು ಇನ್ನೂ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.
ಇದು ಅತ್ಯಂತ ದುರದೃಷ್ಟಕರ ಎಂದು ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ

 

ಕರ್ನಾಟಕದ ಮುಸ್ಲಿಮರು ನಿರಾಸೆ ಅನುಭವಿಸುತ್ತಿದ್ದಾರೆ. ಹಿಜಬ್‌ ವಾಪಸ್‌ಗೆ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು. ಹೀಗಿರುವಾಗ ಕರ್ನಾಟಕ ಸರ್ಕಾರವನ್ನು ತಡೆಯುತ್ತಿರುವವರು ಯಾರು ಎಂದು ಟಾಂಗ್‌ ಕೊಟ್ಟಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಡಳಿತವು ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹಿಜಬ್‌ ವಾಪಸ್‌ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ವೋಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ'- ಸಿಎಂಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ: ಇಂಡಿಯನ್‌ ಆಯಿಲ್‌'ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ರಾಹುಲ್‌ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ'- ಮೋದಿಅಯೋಧ್ಯೆಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ 200 ಮಂದಿ ಪಾಕಿಸ್ತಾನಿಗಳುಲೈಂಗಿಕ ಕಿರುಕುಳ ಆರೋಪ: ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್'ನೇಹಾ ಹತ್ಯೆ ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣ'- ಅಮಿತ್ ಶಾರೈತರ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರಾಜಾಹುಲಿಲೈಂಗಿಕ ಕಿರುಕುಳ: ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು ಇಂದು?ವಾಹನ ಸವಾರರೇ ಟೋಲ್‌ ಶುಲ್ಕದ ವಿಚಾರದಲ್ಲಿ ಮೋಸ ಹೋಗುತ್ತಿದ್ದೀರಾ..? ಈ ವಿಚಾರವನ್ನು ಮಿಸ್ಓ ಮಾಡದೆ ಓದಿ'ಸಂವಿಧಾನ ಬದಲಾವಣೆ ಆದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ'- ಬಿಜೆಪಿ ಶಾಸಕ