LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರ್ಕಾರದ ಹಗರಣಗಳನ್ನ ಸಿಎಂ ಮುಚ್ಚಿ ಹಾಕಲು ನಿಂತಿದ್ದಾರೆ'- ಬಿ.ವೈ ವಿಜಯೇಂದ್ರ

ಬಳ್ಳಾರಿ: ಸರ್ಕಾರದ ಹಗರಣಗಳನ್ನ ಸಿಎಂ ಸಿದ್ದರಾಮಯ್ಯ ಅವರು ಮುಚ್ಚಿ ಹಾಕಲು ನಿಂತಿದ್ದಾರೆ. ನಾಗೇಂದ್ರ, ದದ್ದಲ್ ಗೆ ಹಗರಣದ ಎಸ್‌ಐಟಿ ತನಿಖೆಗೆ ನೋಟೀಸ್ ನೀಡಲಿಲ್ಲ. ಇಡಿ ತನಿಖೆಗೆ ಎಂಟ್ರಿ ಆದ ಬಳಿಕ ಅದರ ಕಾವು ಸಿಎಂಗೆ ಗೊತ್ತಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವುದನ್ನು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅಧಿಕಾರಿಗಳೇ ಹಗರಣ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರಿಗೆ ರಾಜೀನಾಮೆ ನೀಡಲು ಸಿಎಂ ಹೇಳಿದ್ದೇಕೆ? ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ರನ್ನು ಸಿಎಂ ಹಾಗೂ ಡಿಸಿಎಂ ರಕ್ಷಿಸುತ್ತಿದ್ದಾರೆ ಎಂದರು.

ನಿಯಮವನ್ನು ಗಾಳಿಗೆ ತೋರಿಸಿ ಸಿಎಂ ಕುಟುಂಬಸ್ಥರು ನಿವೇಶನ ಪಡೆದಿದ್ದಾರೆ. ಹಗರಣವನ್ನು ಬೆಳಕಿಗೆ ತಂದ ಆರ್ ಟಿಐ ಕಾರ್ಯಕರ್ತರನ್ನು ಜೈಲಿಗೆ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಆಶ್ಚರ್ಯ ಪಡುವಂತಾಗಿದೆ. ಅಷ್ಟು ಹಗರಣಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅಹಿಂದ ಸಿಎಂ ಆಗಿರುವುದನ್ನು ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆ. ಸೋಮವಾರದ ನಂತರ ಸದನದಲ್ಲಿ ಮುಡಾ ಹಗರಣದ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.

ಮಾಜಿ ಸಚಿವ ನಾಗೇಂದ್ರ ಅವರು ಬಾಯಿ ಬಿಟ್ಟರೆ ಹಗರಣಗಳ ಮೂಲ ಸಿಎಂ ಹಾಗೂ ಡಿಸಿಎಂ ಬುಡಕ್ಕೆ ಬರುತ್ತದೆ. ಸದನದ ನಡುವೆಯೂ ಪತ್ರಿಕಾಗೋಷ್ಠಿ ಮಾಡಿ ತಮ್ಮನ್ನು ತಾವೇ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಈ ಹಗರಣಕ್ಕೂ ಹಣಕಾಸಿನ ಇಲಾಖೆ ಸಂಬಂಧವಿಲ್ಲ ಎಂದು ಅವರು ಹೇಳುತ್ತಾರೆ. ಸಂಬಂಧ ಇದೆ ಅಂದರೆ ಸಿಎಂ ಬುಡಕ್ಕೇ ಬರುತ್ತದೆ. ಯಾವುದೇ ರಾಜ್ಯದ ಸಿಎಂ ಅಸಮರ್ಥ ಇದ್ದರೆ ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ