LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ'- ಸಿಎಂ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ.ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬುಲ್ಡೋಜರ್‌ ಕಾರ್ಯಾಚರಣೆಗೆ ಬ್ರೇಕ್‌ ಹಾಕಿದ ಸುಪ್ರೀಂ ಕೋರ್ಟ್‌ಕೆಲಸದ ವೇಳೆ,ಊಟ ಮತ್ತು ಕಾಫಿ ವಿರಾಮದ ಸಮಯದಲ್ಲಿ ಹೆಚ್ಚು ಲೈಂಗಿಕತೆ ಹೊಂದಲು ಪುಟಿನ್‌ ಸಲಹೆಸರ್‌ ನೀವು ಯಾರಿಗೆ ಗೊತ್ತಿಲ್ಲ'! : ಕಾದಂಬರಿಕಾರ 'ಡಾ.ಬೈರಪ್ಪ'ರನ್ನ ಸರ್ ಎಂದು ಕರೆದ ಪ್ರಧಾನಿ ಮೋದಿರಾಜ್ಯದಲ್ಲಿ ನಿಫಾ ವೈರಸ್‌ ಭೀತಿ: ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್‌ಕತ್ತೆ ಸಾಕಿದ್ರೆ ತಿಂಗಳಿಗೆ ಬರುತ್ತೆ ಲಕ್ಷ-ಲಕ್ಷ ಆದಾಯ..!!ಅಕ್ಟೋಬರ್ 1ರವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ಹೇರಿದ ಸುಪ್ರೀಂ ಕೋರ್ಟ್ಪಡಿತರ ಚೀಟಿದಾರರಿಗೆ ಶಾಕ್‌: ನ.1ರಿಂದ ಇವರಿಗೆ ಸಿಗಲ್ಲ ರೇಷನ್‌..!'ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ '- ಅಮಿತ್ ಶಾಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ: ಸಂಘ ನಿರ್ಮಾಣ, ಸಾಲ ಸೌಲಭ್ಯ..!HSRP ನಂಬರ್‌ ಪ್ಲೇಟ್‌ ಅಳವಡಿಸದವರ ವಿರುದ್ಧ ಸದ್ಯ ಕ್ರಮ ಇಲ್ಲ ಎಂದ ಸರ್ಕಾರ..!