LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರ್ಕಾರ ಕೆಡವಲು ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್'- ಗಾಣಿಗ ರವಿ

ಮಂಡ್ಯ : ಸರ್ಕಾರ ಕೆಡವಲು ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಾಣಿಗ ರವಿಕುಮಾರ್ ಮತ್ತೆ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೆಡವಲು ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ. ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದು ಹೇಳಿದ್ದಾರೆ.

ನಮ್ಮ ಶಾಸಕರನ್ನ ಎಲ್ಲೆಲ್ಲಿ ಸಂಪರ್ಕಿಸಿದ್ದರು? ಏನೇನು ಆಫರ್ ಮಾಡಿದ್ದರು? ಎನ್ನುವುದನ್ನು ಶೀಘ್ರದಲ್ಲೇ ಮಾಧ್ಯಮಗಳ ಮೂಲಕ ದಾಖಲೆ ಬಿಡುಗಡೆ ಮಾಡುತ್ತೇವೆ. ಸರ್ಕಾರ ಕೆಡವಲು ಪ್ರಯತ್ನಿಸದವರು ಈ ಬಗ್ಗೆ ತನಿಖೆ ಮಾಡಿಸಿ ಎನ್ನುತ್ತಾರೆ. ಪ್ರಯತ್ನದಲ್ಲಿರುವವರು ಯಾರು ತನಿಖೆ ಮಾಡಿಸಿ ಎನ್ನುವುದಿಲ್ಲ. ನಮ್ಮ ಶಾಸಕರರು ಬಿಜೆಪಿ ಆಮಿಷಗಳಿಗೆ ಬಲಿಯಾಗಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ಸರ್ಕಾರವೂ ಸ್ಥಿರವಾಗಿದೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!