ಸಿಇಒ, ಡಿಡಿಪಿಐ ಮತ್ತು ಬಿಇಒಗಳಿಗೆ ಸಿಎಂ ಖಡಕ್ ಸೂಚನೆ ಇದು.!
ಬೆಂಗಳೂರು : ಮುಂದಿನ ವರ್ಷಗಳಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಕುಸಿತವಾದರೆ ಆಯಾ ಜಿಲ್ಲಾ ಸಿಇಒ, ಡಿಡಿಪಿಐ ಮತ್ತು ಬಿಇಒಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಫಲಿತಾ೦ಶ ಕುಸಿಯಲು ಪ್ರಮುಖ ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಇದರಲ್ಲಿ ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದ್ದಾರೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.