LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಜೆಐ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ- ಸಂಜಯ್‌ ರಾವತ್‌ ಆಕ್ಷೇಪ

ನವದೆಹಲಿ : ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದಕ್ಕೆ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ನಾಯಕ ಸಂಜಯ್‌ ರಾವತ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ ಆರತಿ ಎತ್ತಿದ್ದರು. ಈ ವಿಚಾರವನ್ನು ರಾವತ್‌ ಪ್ರಸ್ತಾಪ ಮಾಡಿ ಹಲವು ಪ್ರಶ್ನೆ ಎತ್ತಿದ್ದಾರೆ. ಗಣಪತಿ ಹಬ್ಬ ನಡೆಯುತ್ತಿದೆ, ಜನರು ಪರಸ್ಪರರ ಮನೆಗೆ ಭೇಟಿ ನೀಡುತ್ತಾರೆ. ಪ್ರಧಾನಿ ಇದುವರೆಗೆ ಎಷ್ಟು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಮಂತ್ರಿಯವರು ಸಿಜೆಐ ಮನೆಗೆ ತೆರಳಿ ಆರತಿ ಬೆಳಗಿದ್ದಾರೆ ಎಂದು ಟೀಕಿಸಿದ್ದಾರೆ.

ಸಂವಿಧಾನದ ಪಾಲಕರು ರಾಜಕಾರಣಿಗಳನ್ನು ಭೇಟಿ ಮಾಡಿದರೆ, ಅದು ಜನರ ಮನಸ್ಸಿನಲ್ಲಿ ಅನುಮಾನವನ್ನು ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಪ್ರತಿವಾದಿಯಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದಿಂದ ದೂರವಿರಬೇಕು. ಪ್ರಕರಣದ ಪ್ರತಿವಾದಿಯ ಜೊತೆ ಅವರ ನಂಟು ಬಹಿರಂಗವಾಗಿ ಕಾಣುತ್ತಿದೆ. ಪ್ರಕರಣದಲ್ಲಿ ನಮಗೆ ಸಿಜೆಐ ನ್ಯಾಯ ನೀಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಸಂಜಯ್‌ ರಾವತ್‌ ಕೇಳಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನ