LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿನಿಮಾ ಆಸೆ ತೋರಿಸಿ ಹನಿ ಖೆಡ್ಡಾಗೆ ಕೆಡವಿ 40 ಲಕ್ಷ ಪೀಕಿದ ಸುಂದರಿ ಅಂಡ್ ಗ್ಯಾಂಗ್...!

ಬೆಂಗಳೂರು: ಸಿನಿಮಾ ಹೆಸ್ರಲ್ಲಿ ಆ ಸುಂದರಿ ಬ್ಯುಸಿನೆಸ್ ಮೆನ್ ಗೆ ಹನಿ ಗಾಳ ಬೀಸಿದ್ದಾಳೆ. ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್ ನಲ್ಲಿದ್ದೇನೆ ಅಂತ ಕಲರ್ ಕಲರ್ ಕತೆ ಕಟ್ಟಿದ್ದಾಳೆ. ಸುಂದರಿ ಮಾತು ನಂಬಿ ಆ ಬ್ಯುಸಿನೆಸ್ ಮ್ಯಾನ್‌ ಕೂಡ ಆಕೆಯ ಸಂಗ ಮಾಡಿದ್ದಾನೆ. ಇದಾದ ಕೆಲ ದಿನಗಳ‌ ನಂತರ ಡೈರೆಕ್ಟರ್ ಗೆ ಹಣದ ಕಷ್ಟ ಇದೆ ಅಂತ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ.

ನಂತರ ಹಣ ವಾಪಸ್ ಕೇಳಿದ್ರೆ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವಿಡಿಯೋ ಮಾಡಿಕೊಂಡಿರೋದಾಗಿ ದೂರುದಾರ ಆರೋಪಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆ ಸುಂದರಿ ಇದೇ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಬ್ರೇಸ್ ಲೈಟ್, ಚೈನ್ ಅಂತೆಲ್ಲಾ ಸುಮಾರು ನಲವತ್ತು ಲಕ್ಷ ಹಣ ಪೀಕಿದ್ದಾಳಂತೆ. ಇಷ್ಟಕ್ಕೂ ಸುಮ್ಮನಾಗದೆ ಕಾರು ಕೊಡಿಸು ಅಂತ ದುಂಬಾಲು ಬಿದ್ದಿದ್ಳಂತೆ.

ಇದಕ್ಕೆ ಒಪ್ಪದಿದ್ದಾಗ ಆರೋಪಿ ಕಾವ್ಯ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬುವವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳಂತೆ. ಹಣ ಕೊಡದಿದ್ರೆ ವಿಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲಾಕ್ ಮೇಲ್ ಮಾಡಿದ್ರಂತೆ. ಅಷ್ಟೇ ಅಲ್ಲದೇ ಹಣ ನೀಡದಿದ್ದಾಗ ಸೋಶಿಯಲ್ ಮೀಡಿಯಾದಲ್ಲಿ ದೂರುದಾರನ ಫೋಟೋ ಹಾಕಿ ಮಾನ ಹರಣ ಮಾಡಿದ್ದು, ದೂರುದಾರ ಅಶೋಕನಗರ ಠಾಣೆಯಲ್ಲಿ ಕಾವ್ಯ, ದಿಲೀಪ್, ರವಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಸದ್ಯ ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ‌.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌