LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ' - ಸಿ.ಎಂ

ಬೆಂಗಳೂರು:ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ