LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ. 02 ರಿಂದ ಗೌರಸಮುದ್ರ ಮಾರಮ್ಮ ದೇವಿ ಜಾತ್ರಾ ಮಹೋತ್ಸವದ ವಿವರ ಇಲ್ಲಿದೆ.!

 

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ಜಾತ್ರಾ ಮಹೋತ್ಸವ ಸೆಪ್ಟೆಂಬರ್ 02 ರಿಂದ 04 ರವರೆಗೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 01ರಂದು ಹುತ್ತಕ್ಕೆ ಅಭಿಷೇಕ, ಸೆ.02ರಂದು ಮೂಲ ಸನ್ನಿಧಿಗೆ ಅಭಿಷೇಕ, ಸೆ.03ರಂದು ಮಾರಮ್ಮ ದೇವಿಯು ತುಂಬಲಿಗೆ ಆಗಮಿಸಿ ಗೌರಸಮುದ್ರಕ್ಕೆ ವಾಪಸ್ಸಾಗುವುದು. ನಂತರ ರಾತ್ರಿಯೆಲ್ಲಾ ಊರಿನಲ್ಲಿ ದೇವಿಯ ಮೆರವಣಿಗೆ ಉತ್ಸವನ್ನು ವಿಜೃಂಭಣೆಯಿAದ ಆಚರಿಸಲಾಗುವುದು.

ಸೆ.04ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಶ್ರೀ ಮಾರಮ್ಮ ದೇವಿ ಮರಕ್ಕೆ ಪೂಜೆ, ಸೆ.05ರಂದು ರಾತ್ರಿ 8.30ಕ್ಕೆ ಓಕಳಿ ನಂತರ ಶ್ರೀ ಮಾರಮ್ಮದೇವಿಗೆ ಮಹಾ ಮಂಗಳಾರತಿ ನಂತರ ಮೆರವಣಿಗೆಯೊಂದಿಗೆ ದೇವಿಯ ಗರ್ಭಗುಡಿಯ ಪ್ರವೇಶ ನಡೆಯಲಿದೆ.

ಭಕ್ತಾಧಿಗಳಲ್ಲಿ ವಿಶೇಷ ಸೂಚನೆ: ಹರಕೆ ಮಾಡಿಕೊಂಡ ಭಕ್ತಾಧಿಗಳು ತುಂಬಲಿಗೆ ಹಾಗೂ ಗೌರಸಮುದ್ರದ ಮೂಲ ದೇವಸ್ಥಾನದಲ್ಲಿ ಎರಡೂ ಕಡೆ ಶ್ರೀದೇವಿಗೆ ಹಾಕುವ ಬೆಳ್ಳಿ ಬಂಗಾರದ ಒಡವೆ, ಸೀರೆ ಇತ್ಯಾದಿ ವಸ್ತಾçಭರಣಗಳನ್ನು ವಿಶೇಷವಾಗಿ ವ್ಯವಸ್ಥೆ ಮಾಡಿರುವ ಹುಂಡಿಯಲ್ಲಿಯೇ ಕಾಣಿಕೆಗಳನ್ನು ಹಾಕುವುದು. ಉಳ್ಳೇಗೆಡ್ಡೆ(ಈರುಳ್ಳಿ)ಗಳನ್ನು ದೇವಿಗೆ ಜೋರಾಗಿ ಎಸೆಯುವುದರಿಂದ ದೇವಿಯ ಒಡವೆಗಳು ಕೆಳಗೆ ಬೀಳುತ್ತವೆ. ಜನರಿಗೆ ಕಣ್ಣು ಮತ್ತು ಮುಖಕ್ಕೆ ಪೆಟ್ಟು ಬಿದ್ದು ತುಂಬಾ ತೊಂದರೆಯಾಗುತ್ತದೆ. ಆದ್ದರಿಂದ ಭಕ್ತಾಧಿಗಳು ಈರುಳ್ಳಿಯನ್ನು ದೇವಿಯ ಸನ್ನಿಧಿಗೆ ಮಾತ್ರ ಅರ್ಪಿಸುವುದು. ಗೌರಸಮುದ್ರ ಗ್ರಾಮ ಪಂಚಾಯಿತಿಯಿAದ ನೀರಿನ ಸೌಕರ್ಯ, ಸ್ಥಳಗಳ ಸೌಕರ್ಯ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿರುವುದರಿಂದ ಅದನ್ನು ಸದುಪಯೋಗ ಪಡೆದುಕೊಳ್ಳುವುದು. ಹರಕೆ ಮಾಡಿಕೊಂಡ ಭಕ್ತಾಧಿಗಳು ದೇವಿಗೆ ಹಾಕುವ ಒಡವೆಗಳ ಬದಲಿಗೆ ನಗದು ಹಣವನ್ನು ಪೂಜಾರಿ ಕೈಗೆ ಕೊಡದೇ ತುಂಬಲಲ್ಲಿ ಮರದ ಕೆಳಗೆ ಇರುವ ಹಾಗೂ ಗೌರಸಮುದ್ರದ ಮೂಲ ದೇವಸ್ಥಾನದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಯಲ್ಲಿ ಮಾತ್ರ ಹಾಕುವುದು. ಅಕ್ಕಿ ಬೇಳೆಯನ್ನು ಅರ್ಚಕರಿಗೆ ಕೊಡುವಾಗ ಅದರಲ್ಲಿ ಇರತಕ್ಕಂತಹ ಮುಡುಪು, ಕಣ್ಣು, ಕೋರೆ ಮೀಸೆಗಳನ್ನು ಕಾಣಿಕೆ ಹುಂಡಿಯಲ್ಲಿ ಮಾತ್ರ ಹಾಕುವುದು. ಭಕ್ತಾಧಿಗಳು ತಮ್ಮೊಂದಿಗೆ ಜಾತ್ರೆಗೆ ಕರೆತರುವ ಚಿಕ್ಕಮಕ್ಕಳ ಬಗ್ಗೆ ಅವರುಗಳು ತಪ್ಪಿಸಿಕೊಳ್ಳದಂತೆ ನಿಗಾ ಇಡುವುದು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಜಾತ್ರೆಯಲ್ಲಿ ಪ್ರಾಣಿಬಲಿಯನ್ನು ನಿಷೇಧಿಸಿದೆ. ಅಂತೆಯೇ ಜಾತ್ರೆಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವುದು. ಅಕ್ಟೋಬರ್ 01ರಂದು “ಮರಿಪರಿಷೆ” (ತಿಂಗಳ ಜಾತ್ರೆ) ನಡೆಯಲಿದೆ.

ಜಾತ್ರೆ ಮಹೋತ್ಸವಕ್ಕೆ ವಿಶೇಷ ಆಹ್ವಾನಿತರಾಗಿ ಸಂಸದ ಗೋವಿಂದ ಎಂ ಕಾರಜೊಳ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಬಿ.ಯೋಗೀಶ್ ಬಾಬು, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಹೆಚ್.ಬಸವರಾಜೇಂದ್ರ, ಗೌರಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಓಬಣ್ಣ ಸೇರಿದಂತೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸುವರು ಎಂದು ಚಳ್ಳಕೆರೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ