LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ.18 ರಿಂದ 20 ರವರೆಗೆ ಗೌರಸಮುದ್ರ ಶ್ರೀ ಮಾರಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳು ಇದು.!

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವು ಇದೇ ಸೆಪ್ಟೆಂಬರ್ 18 ರಿಂದ 20 ರವರೆಗೆ ನಡೆಯಲಿದೆ.

ಸೆಪ್ಟೆಂಬರ್ 17ರಂದು ಭಾನುವಾರ ಹುತ್ತಕ್ಕೆ ಅಭಿಷೇಕ, 18ರಂದು ಸೋಮವಾರ ಮೂಲ ಸನ್ನಿಧಿಗೆ ಅಭಿಷೇಕ, 19ರಂದು ಮಂಗಳವಾರ ಶ್ರೀ ಮಾರಮ್ಮ ದೇವಿಯು ತುಂಬಲಿಗೆ ಆಗಮಿಸಿ, ಗೌರಸಮುದ್ರಕ್ಕೆ ವಾಪಾಸ್ಸಾಗುವುದು, ನಂತರ ರಾತ್ರಿಯೆಲ್ಲಾ ಊರಿನಲ್ಲಿ ದೇವಿಯ ಮೆರವಣಿಗೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. 20ರಂದು ಬುಧವಾರ ಓಕಳಿ ನಂತರ ರಾತ್ರಿ 8 ಗಂಟೆಗೆ ಶ್ರೀ ಮಾರಮ್ಮದೇವಿಯ ಮೆರವಣಿಗೆ, 21ರಂದು ಗುರುವಾರ ಬೆಳಿಗ್ಗೆ 8.30 ರಿಂದ ಶ್ರಿ ಮಾರಮ್ಮ ದೇವಿಗೆ ಮಹಾಮಂಗಳಾರತಿ ನಂತರ ದೇವಿಯ ಗರ್ಭಗುಡಿ ಪ್ರವೇಶ ನಡೆಯಲಿದೆ.

ಭಕ್ತಾಧಿಗಳಿಗೆ ವಿಶೇಷ ಸೂಚನೆ: ಹರಕೆ ಮಾಡಿಕೊಂಡ ಭಕ್ತಾಧಿಗಳು ತುಂಬಲಿಗೆ ಹಾಗೂ ಗೌರಸಮುದ್ರದ ಮೂಲ ದೇವಸ್ಥಾನದಲ್ಲಿ ಎರಡೂ ಕಡೆ ಶ್ರೀ ದೇವಿಗೆ ಹಾಕುವ ಬೆಳ್ಳಿ ಬಂಗಾರದ ಒಡವೆ, ಸೀರೆ ಇತ್ಯಾದಿ ವಸ್ತ್ರಭರಣಗಳನ್ನು ವಿಶೇಷವಾಗಿ ವ್ಯವಸ್ಥೆ ಮಾಡಿರುವ  ಹುಂಡಿಯಲ್ಲಿಯೇ ಕಾಣಿಕೆಗಳನ್ನು ಹಾಕುವುದು. ಉಳ್ಳೇಗಡ್ಡೆಗಳನ್ನು (ಈರುಳ್ಳಿ) ದೇವಿಗೆ ಜೋರಾಗಿ ಎಸೆಯುವುದರಿಂದ ದೇವಿಯ ಒಡವೆಗಳು ಕೆಳಗೆ ಬೀಳುತ್ತವೆ. ಜನರಿಗೆ ಕಣ್ಣು ಮತ್ತು ಮುಖಕ್ಕೆ ಪೆಟ್ಟು ಬಿದ್ದು ತುಂಬಾ ತೊಂದರೆಯಾಗಿತ್ತದೆ. ಆದ್ದರಿಂದ ಭಕ್ತಾಧಿಗಳು ಈರುಳ್ಳಿಯನ್ನು ದೇವರ ಸನ್ನಿಧಿಗೆ ಮಾತ್ರ ಅರ್ಪಿಸುವುದು. ಗೌರಸಮುದ್ರ ಗ್ರಾಮ ಪಂಚಾಯಿತಿಯಿಂದ ನೀರಿನ ಸೌಕರ್ಯ, ಸ್ಥಳಗಳ ಸೌಕರ್ಯ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿರುವುದರಿಂದ ಅದನ್ನು ಸದುಪಯೋಗ ಪಡೆದುಕೊಳ್ಳಬೇಕು. ಹರಕೆ ಮಾಡಿಕೊಂಡ ಭಕ್ತಾಧಿಗಳು ದೇವಿಗೆ ಹಾಕುವ ಒಡವೆಗಳ ಬದಲಿಗೆ ನಗದು ಹಣವನ್ನು ಪೂಜಾರಿಗಳ ಕೈಗೆ ಕೊಡದೆ ತುಂಬಲಲ್ಲಿ ಮರದ ಕೆಳಗೆ ಇರುವ ಹಾಗೂ ಗೌರಸಮುದ್ರದ ಮೂಲ ದೇವಸ್ಥಾನದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಯಲ್ಲಿ ಮಾತ್ರ ಹಾಕುವುದು. ಅಕ್ಕಿ ಬೇಳೆಯನ್ನು ಅರ್ಚಕರಿಗೆ ಕೊಡುವಾಗ ಅದರಲ್ಲಿ ಇರತಕ್ಕಂತಹ ಮುಡುಪು, ಕಣ್ಣು, ಕೋರೆ ಮೀಸೆಗಳನ್ನು ಕಾಣಿಕೆ ಹುಂಡಿಯಲ್ಲಿ ಮಾತ್ರ ಹಾಕುವುದು. ಭಕ್ತಾಧಿಗಳು ತಮ್ಮೊಂದಿಗೆ ಜಾತ್ರೆಗೆ ಕರೆತರುವ ಚಿಕ್ಕಮಕ್ಕಳ ಬಗ್ಗೆ ಅವರುಗಳು ತಪ್ಪಿಸಿಕೊಳ್ಳದಂತೆ ನಿಗಾ ವಹಿಸಬೇಕು.

ಪ್ರಾಣಿ ಬಲಿ ನಿಷೇಧ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಿದೆ. ಅಂತೆಯೇ ಜಾತ್ರೆಯಲ್ಲಿ ಸ್ವಚತೆ ಹಾಗೂ ನೈರ್ಮಲ್ಯ ಕಾಪಾಡಬೇಕು. 2023ರ ಅಕ್ಟೋಬರ್ 17ರಂದು ಮಂಗಳವಾರ “ಮರಿ ಪರಿಷೆ” (ತಿಂಗಳ ಜಾತ್ರೆ) ನಡೆಯಲಿದೆ ಎಂದು ಚಳ್ಳಕೆರೆ ತಾಲ್ಲೂಕು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!