LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೈಬರ್ ವಂಚನೆ ಬಗ್ಗೆ ಎಚ್ಚರವಾಗಿರಿ: ಜನತೆಗೆ ಪ್ರಧಾನಿ ಮೋದಿ ಕರೆ

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದು, ಜನರು ಜಾಗೃತಿವಹಿಸುವಂತೆ ಕರೆ ನೀಡಿದ್ದಾರೆ.

115ನೇ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಮುಖವಾಗಿ ಸೈಬರ್ ವಂಚನೆ ಪ್ರಕರಣ ಪ್ರಸ್ತಾಪಿಸಿದರು. ಸೈಬರ್ ವಂಚಕರು ಹೇಗೆಲ್ಲ ಸುಳ್ಳು ಹೇಳಿ ವಂಚಿಸುತ್ತಾರೆ ಎಂಬುದಕ್ಕೆ ವಿಜಯಪುರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಮುಂಬೈ ಪೊಲೀಸರ ಹೆಸರಲ್ಲಿ ಕರೆ ಮಾಡಿದ್ದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಮುಂಬೈ ಪೊಲೀಸ್ ಅಥವಾ ಯಾವುದೇ ತನಿಖಾ ಸಂಸ್ಥೆ ಹೆಸರಲ್ಲಿ ಕರೆ ಮಾಡಿ ಆಧಾರ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಕೇಳಿದರೆ ಯಾವುದೇ ಕಾರಣಕ್ಕೂ ಕೊಡಬೇಡಿ. ನೀವು ಕೊಡದೇ ಇದ್ದಾಗ ನಿಮ್ಮನ್ನು ಅವರು ಅರೆಸ್ಟ್ ಮಾಡುತ್ತೇವೆ ನೀವು ‘ಡಿಜಿಟಲ್ ಅರೆಸ್ಟ್’ ಆಗಿದ್ದೀರಾ ಎಂದು ಬೆದರಿಸಬಹುದು. ಆದರೆ ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಎಂಬ ವ್ಯವಸ್ಥೆಯೇ ಇಲ್ಲ ಎಂಬ ಬಗ್ಗೆ ಅರಿವಿರಲಿ ಎಂದು ಹೇಳಿದ್ದಾರೆ.



ಸೈಬರ್ ವಂಚಕರು ಪೊಲೀಸರು, ಆರ್ ಬಿಐ ಅಧಿಕಾರಿಗಳು, ಸಿಬಿಐ, ನಾರ್ಕೊಟಿಕ್ಸ್ ಅಧಿಕಾರಿಗಳ ಹೆಸರಲ್ಲಿ ನಿಮಗೆ ಕರೆ ಮಾಡಬಹುದು. ಈ ರೀತಿ ಕರೆಗಳು ಬಂದಾಗ ಗಾಬರಿಯಾಗದೇ ಹುಷಾರಾಗಿರಿ. ಯಾವುದೇ ತನಿಖಾ ಏಜೆನ್ಸಿಯವರು ಫೋನ್ ಕರೆ, ವಿಡಿಯೋ ಕಾಲ್ ಮಾಡುವುದಿಲ್ಲ ಎಂಬುದು ಗಮನದಲ್ಲಿರಲಿ. ಅಂತಹ ಕರೆಗಳು ಬಂದರೆ ಸಾಧ್ಯವಾದರೆ ರೆಕಾರ್ಡ್ ಮಾಡಿ. ಸೈಬರ್ ಠಾಣೆಗೆ ದೂರು ನೀಡಿ ಎಂದಿದ್ದಾರೆ.



ಆನ್ ಲೈನ್ ವಂಚನೆ ಕರೆಗಳು ಬಂದರೆ ತಕ್ಷಣ ಸೈಬರ್ ಕ್ರೈಂ ಹೆಲ್ಪ್ ಲೈನ್ ಸಂಖ್ಯೆ 1930 ಹಾಗೂ cybercrime.gov.in ವೆಬ್ ಸೈಟ್ ಗೆ ದೂರು ನೀಡಿ. ಜೊತೆಗೆ #SaveDigitalindia ಅನ್ನೋ ಹ್ಯಾಷ್ ಟ್ಯಾಗ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10 ತಿಂಗಳ ಮಗುವಿನ ಪ್ರಾಣ ಕಸಿದ ತಂದೆ ಎಸೆದ ತುಂಡು ಬೀಡಿ!!ಕ್ಯಾನ್ಸರ್’ಗೆ ಇನ್ನು ಕಿಮೋ ಥೆರಪಿ ಬೇಕಿಲ್ಲ..!! ಮಹತ್ವದ ಆವಿಷ್ಕಾರ ಹುಟ್ಟುಹಾಕಿದ ಸಂಶೋಧಕರ ತಂಡಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?'ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲ'- ನಟ ಸಲ್ಮಾನ್‌ ಖಾನ್‌ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶಲೋಕಾಯುಕ್ತ ಹೆಸರು ಹೇಳಿ ಕೋಟಿ..ಕೋಟಿ ರೂಪಾಯಿ ಲೂಟಿ..!!ಉತ್ತಮ ಸಂಬಳದ ವೃತ್ತಿ ತೊರೆದು ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ ಯಶೋಗಾಥೆಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನಜೂನ್ 19 ರಂದು ನೇರ ನೇಮಕಾತಿ ಸಂದರ್ಶನಇಂದಿನಿಂದ ಜೂನ್ 17 ರಿಂದ 30 ರವರೆಗೆ ಈ ಹಳ್ಳಿಗಳಲ್ಲಿಈ ಸಮಯದಲ್ಲಿ  ಕರೆಂಟ್ ಇರಲ್ಲ.!