LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ವಾತಂತ್ರ್ಯ ತಂದು ಕೊಟ್ಟಿದ್ದು 40 ಕೋಟಿ ಜನ ಈಗ 140 ಕೋಟಿ ಮಂದಿ ಏನೆಲ್ಲ ಮಾಡಬಹುದೆಂದು ಊಹಿಸಿ-ಮೋದಿ

ನವದೆಹಲಿ : ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಅಂತೆಯೇ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ 11ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ. ಕಳೆದ ಬಾರಿ ಸತತ 10ನೇ ಬಾರಿಗೆ ಧ್ವಜಾರೋಹಣ ಮಾಡುವ ಮೂಲಕ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​ ದಾಖಲೆಯನ್ನ ಮೋದಿ ಸರಿಗಟ್ಟಿದ್ದರು. ಈ ಬಾರಿ ಮಾಜಿ ಪ್ರಧಾನಿ ಜವಹರ್​ ಲಾಲ್​ ನೆಹರು ಹಾಗೂ ಇಂದಿರಾ ಗಾಂಧಿ ಬಳಿಕ ಕೆಂಪು ಕೋಟೆಯಲ್ಲಿ ಮೋದಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡಿ ಮತ್ತೊಂದು ಹಿಸ್ಟರಿ ಕ್ರಿಯೇಟ್ ಮಾಡಿದ್ದಾರೆ. ಧ್ವಜಾರೋಹಣ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ.. ಇಂದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ‘ಸ್ವಾತಂತ್ರ್ಯ ಪ್ರೇಮಿಗಳಿಗೆ’ ಗೌರವ ಸಲ್ಲಿಸುವ ದಿನ. ಈ ದೇಶ ಅವರಿಗೆ ಋಣಿಯಾಗಿದೆ. ನಮ್ಮ ಪೂರ್ವಜರ ರಕ್ತ ನಮ್ಮ ದೇಹದಲ್ಲಿದೆ. ಇಂದು ನಾವು 140 ಕೋಟಿ ಪ್ರಜೆಗಳಾಗಿದ್ದೇವೆ. ದೃಢಸಂಕಲ್ಪದಿಂದ ಮುನ್ನಡೆದರೆ ಪ್ರತಿಯೊಂದು ಸವಾಲುಗಳನ್ನು ಮೆಟ್ಟಿ ನಿಂತು ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಬಹುದು ಎಂದರು. ಪ್ರೀತಿಯ ದೇಶವಾಸಿಗಳೇ, ಈ ವರ್ಷ ಮತ್ತು ಕಳೆದ ವರ್ಷ ದೇಶದಲ್ಲಿ ಅನೇಕ ನೈಸರ್ಗಿಕ ವಿಕೋಪಗಳು ಸಂಭವಿಸಿವೆ. ಇದರಿಂದ ಹಲವು ಮಂದಿ ತಮ್ಮ ಕುಟುಂಬಗಳನ್ನು ಕಳೆದುಕೊಂಡಿದ್ದಾರೆ. ಆಸ್ತಿ-ಪಾಸ್ತಿ ನಷ್ಟವಾಗಿದೆ. ರಾಷ್ಟ್ರೀಯ ಖಜಾನೆಗೆ ನಷ್ಟ ಉಂಟಾಗಿದೆ. ಕುಟುಂಬ ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೇಶವು ಅವರೊಂದಿಗೆ ನಿಂತಿದೆ ಎಂದರು.

.ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!