LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ'- ಸಿಎಂ

ಮಂಗಳ್ ವೇಡ (ಮಹಾರಾಷ್ಟ್ರ) : ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿ, ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ ಎಂದರು.ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಪಂಡರಪುರ ಮಂಗಳ್ ವೇಡಾ.ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದರು.

ಜವಾಹರಲಾಲ್ ಅವರಿಂದ ಮನ‌ಮೋಹನ್ ಸಿಂಗ್ ಅವರ ವರೆಗೂ ಕಾಂಗ್ರೆಸ್ಸಿನ ಎಲ್ಲಾ ಪ್ರಧಾನಿಗಳು ಅಂಬೇಡ್ಕರ್ ಅವರ ಆಶಯಕ್ಕೆ ತಕ್ಕಂತೆ ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ ಬಹುತ್ವದ ಚರಿತ್ರೆ ಹೊಂದಿದ್ದಾರೆ ಎಂದರು.‌

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ. ನಿಮ್ಮ ಮನೆ ಬಾಗಿಲಿಗೆ ತರಲಿಲ್ಲ. ಬದಲಿಗೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಕಾಳು, ಬೇಳೆ ಎಲ್ಲದರ ಬೆಲೆ ಏರಿಸಿದರು. ಅಚ್ಛೇ ದಿನ್ ಆಯೆಗಾ ಎಂದರು.

ಕಹಾಂ ಹೈ ಅಚ್ಛೆ ದಿನ್ ? ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು. ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದರು.

ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಈ ಮೋದಿ ಅವರು ರೈತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಬದಲಿಗೆ ಕಾರ್ಪೋರೇಟ್ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ನಾನು ಮೊದಲ ಬಾರಿ ಕರ್ನಾಟಕದ ಮುಖ್ಯಮಂತ್ರಿ ಆದಾಗ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರದಲ್ಲಿ ಮೋದಿಗೆ ಮತ್ತೊಮ್ಮೆ ಸವಾಲೆಸೆದ ಸಿದ್ದರಾಮಯ್ಯ ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸವಾಲು ಹಾಕಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಮಳೆಯ ಆರ್ಭಟ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ9ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ಇಂದಿನಿಂದ ವಿಧಾನ ಮಂಡಲ ಕಲಾಪ ಹಲವು ವಿಷಯಗಳ ಬಗ್ಗೆ ಚರ್ಚೆ.!ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ