LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಹರ್ ಹರ್ ಶಂಭು' ಭಕ್ತಿಗೀತೆ ಹಾಡಿದ್ದ ಮುಸ್ಲಿಂ ಗಾಯಕಿಯ ಸಹೋದರನ ಬರ್ಬರ ಹತ್ಯೆ!

ಲಕ್ನೋ: ಹರ್ ಹರ್ ಶಂಭು ಭಕ್ತಿಗೀತೆಯನ್ನು ಹಾಡಿ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿರುವ ಉತ್ತರ ಪ್ರದೇಶದ ಖ್ಯಾತ ಯೂಟ್ಯೂಬ್​ ಗಾಯಕಿ ಫರ್ಮಾನಿ ನಾಜ್​ ಅವರ ಕಿರಿಯ ಸಹೋದರನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುಜಾಫರ್​ನಗರದ ಮೊಹಮ್ಮದ್​ಪುರ ಮಾಫಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಖುರ್ಷಿದ್​ (18) ಕೊಲೆಯಾದ ಗಾಯಕಿ ಫರ್ಮಾನಿ ನಾಜ್​ ಸೋದರ. ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುವಾಗ ಸಾಲ್ವಾ ರಸ್ತೆ ಬಳಿ ಕೆಲವು ಬೈಕ್ ಸವಾರರು ಖುರ್ಷಿದ್ ಅವರನ್ನು ಸುತ್ತುವರಿದು ಚಾಕು ತೋರಿಸಿದ್ದಾರೆ. ಖುರ್ಷಿದ್​ ವಿರುದ್ಧ ಯಾವುದೇ ಪ್ರಚೋದನೆ ಇಲ್ಲದಿದ್ದರೂ ಆತನಿಗೆ ಚಾಕುವಿನಿಂದ ಇರಿದ ಬಳಿಕ ಆ ಗ್ಯಾಂಗ್ ಸ್ಥಳದಿಂದ ಪರಾರಿಯಾಗಿದೆ. ಕೂಡಲೇ ಖುರ್ಷಿದ್​ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅತುಲ್ ಶ್ರೀವಾಸ್ತವ ತಿಳಿಸಿದ್ದಾರೆ. ಈ ಘಟನೆ ಸಂಬಂಧ ರತನಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. 2022ರಲ್ಲಿ ನಾಜ್ ಹಾಡಿರುವ ಭಗವಾನ್ ಶಿವನನ್ನು ಸ್ತುತಿಸುವ ಭಕ್ತಿಗೀತೆ 'ಹರ್ ಹರ್ ಶಂಭು' ಅನ್ನು ದೇವಬಂದ್‌ನ ಧರ್ಮಗುರುಗಳು "ಅನ್-ಇಸ್ಲಾಮಿಕ್" ಮತ್ತು "ಹರಾಮ್" (ನಿಷೇಧಿತ) ಎಂದು ಕರೆದಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭ