LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಂದೂಗಳ ಮೇಲಿನ ಖಲಿಸ್ತಾನಿ ದಾಳಿಯಲ್ಲಿ ಭಾಗಿಯಾಗಿದ್ದ ಕೆನಡಾ ಪೊಲೀಸ್‌ ಅಧಿಕಾರಿ ಸಸ್ಪೆಂಡ್‌

ಒಟ್ಟಾವಾ : ಕೆನಡಾ ಬ್ರಾಂಪ್ಟನ್‌ ನಗರದಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯ ಸಂದರ್ಭದಲ್ಲಿ ಖಲಿಸ್ತಾನಿ ಧ್ವಜ ಹಿಡಿದು ಭಾರತೀಯರ ವಿರುದ್ಧ ಪ್ರತಿಭಟನೆ ನಡೆಸಿ ಹಲ್ಲೆ ಮಾಡಿದ್ದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಕೆನಡಾ ಸರ್ಕಾರ ಅಮಾನುತುಗೊಳಿಸಿ ಆದೇಶ ನೀಡಿದೆ. ಅಮಾನತುಗೊಂಡ ಪೋಲೀಸ್ ಹರಿಂದರ್ ಸೋಹಿ ಎಂದು ಗುರುತಿಸಲಾಗಿದ್ದು, ಅವರು ಖಲಿಸ್ತಾನಿ ಧ್ವಜವನ್ನು ಹಿಡಿದು, ಹಿಂದೂ ದೇವಾಲಯದ ಎದುರು ಪ್ರತಿಭಟನೆ ನಡೆಸಿದ್ದರು ಎನ್ನಲಾಗಿದೆ. ಸಮುದಾಯ ಸುರಕ್ಷತೆ ಮತ್ತು ಪೊಲೀಸ್‌ ಕಾಯಿದೆಯ ಅನುಗುಣವಾಗಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕೆನಡಾ ಮಾಧ್ಯಮ ಸಂಪರ್ಕ ಅಧಿಕಾರಿ ರಿಚರ್ಡ್ ಚಿನ್ ತಿಳಿಸಿದ್ದಾರೆ. ಎಲ್ಲಾ ಆಯಾಮಗಳಿಂದಲೂ ತನಖೆಯನ್ನು ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದಾರೆ, ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಟೀಕಿಸಿದ್ದಾರೆ. ದಾಳಿ ಘಟನೆ ಬೆನ್ನಲ್ಲೇ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರ ನ್ಯಾಯವನ್ನು ಖಾತ್ರಿಪಡಿಸಿ, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂಬ ನಿರೀಕ್ಷೆಯಿದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!