LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಜಾಬ್ ನಿಷೇಧಿಸಿದರೆ ಮಹಿಳಾ ಸಬಲೀಕರಣ ಸಾಧಿಸಲು ಹೇಗೆ ಸಾಧ್ಯ - ಸುಪ್ರೀಮ್ ಕೋರ್ಟ್ ಪ್ರಶ್ನೆ

ನವದೆಹಲಿ: ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ಆದೇಶ ನೀಡಿದೆ. ಈ ಆದೇಶಕ್ಕೆ ಸುಪ್ರೀಮ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಹಿಜಾಬ್ ಅನ್ನು ನಿಷೇಧಿಸಿದರೆ ಮಹಿಳಾ ಸಬಲೀಕರಣವನ್ನು ಹೇಗೆ ಸಾಧಿಸಬಹುದು ಎಂದು ನ್ಯಾಯಾಲಯವು ಕಾಲೇಜು ಆಡಳಿತವನ್ನು ಕೇಳಿದೆ. ಈ ಬಗ್ಗೆ ತುರ್ತು ವಿಚಾರಣಾ ಮನವಿಯನ್ನು ಸುಪ್ರೀಮ್ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಇದಕ್ಕೂ ಮುನ್ನ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸಹ ತಡೆಯೊಡ್ಡಿದಂತಾಗಿದೆ. ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯಾವುದನ್ನು ಧರಿಸಬಹುದು? ಯಾವುದನ್ನು ಧರಿಸಬಾರದು ಎಂಬುದನ್ನು ನೀವು ಹೇಗೆ ನಿರ್ಧರಿಸುತ್ತೀರಿ? ವಿದ್ಯಾರ್ಥಿನಿಯರು ಯಾವ ಬಟ್ಟೆ ಧರಿಸಬೇಕೆಂದು ಕಾಲೇಜುಗಳು ನಿರ್ಧರಿಸಿದರೆ ಮಹಿಳಾ ಸಬಲೀಕರಣದ ಅರ್ಥವೇನು ಎಂದು ಈ ಸಂದರ್ಭದಲ್ಲಿ ಪೀಠ ಪ್ರಶ್ನಿಸಿದೆ. ಕಾಲೇಜಿನಲ್ಲಿ ಎಲ್ಲರೂ ಸಮಾನರು. ಇದು ಧಾರ್ಮಿಕ ಪ್ರದರ್ಶನಕ್ಕೆ ವೇದಿಕೆಯಾಗಬಾರದು ಎಂಬ ಉದ್ದೇಶದಿಂದ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಮುಂಬೈನ ಚೆಂಬೂರು ಕಾಲೇಜಿನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಹೆಸರಿನಲ್ಲೂ ಧರ್ಮವಿದೆ. ಅದನ್ನು ಹೇಗೆ ತೆಗೆದುಹಾಕುತ್ತೀರಿ ಎಂದು ಕಾಲೇಜು ಆಡಳಿತ ಮಂಡಳಿಗೆ ಪ್ರಶ್ನಿಸಿತು. ಹೆಣ್ಣುಮಕ್ಕಳು ಏನು ಧರಿಸಬೇಕು ಎಂಬುದು ಅವರ ವೈಯಕ್ತಿಕ ನಿರ್ಧಾರ. ದೇಶದಲ್ಲಿ ಅನೇಕ ಧರ್ಮೀಯರು ವಾಸಿಸುತ್ತಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿಗೆ ತಿಳಿದಿಲ್ಲವೇ? ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಂತಹ ವಿಷಯಗಳು ಇನ್ನೂ ಚರ್ಚೆಯಾಗುತ್ತಿರುವುದು ದುರದೃಷ್ಟಕರ ಎಂದ ಸುಪ್ರೀಮ್ ಕೋರ್ಟ್ ನವೆಂಬರ್ 18ಕ್ಕೆ ಮುಂದೂಡಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌